ಉಡುಪಿ : ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ ಕೊರಗ ಕುಟುಂಬಗಳಿಗೆ ಮನೆಗಳನ್ನು ಹಸ್ತಾಂತರ ಮಾಡಿದ್ದಾರೆ.

ಐಟಿಡಿಪಿ ಇಲಾಖೆಯಿಂದ ಮನೆ ನಿರ್ಮಾಣಕ್ಕೆ ಸಹಾಯಧನ ಬಂದಿದ್ದು, ರೆಂಜಾಳ ಗ್ರಾಮದ ದಾನಿಗಳು ಆರ್ಥಿಕ ಸಹಾಯ ಮಾಡಿದ್ದು, ಸುಮಾರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ಆರ್ಥಿಕವಾಗಿ ತೀರಾ ಹಿಂದುಳಿದ ಕೊರಗರ ಮೂರು ಕುಟುಂಬಗಳಿಗಾಗಿ ಮನೆಯನ್ನ ಹಸ್ತಾಂತರ ಮಾಡಲಾಗಿದೆ.

ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರುಗೊಂಡ ಯೋಜನೆಯಲ್ಲಿ ಈ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ದೊಡ್ಡ ಮೊತ್ತವನ್ನು ಸಾರ್ವಜನಿಕರು ಮತ್ತು ದಾನಿಗಳು ನೀಡಿದ್ದು ಶಾಸಕ ಸುನಿಲ್ ಕುಮಾರ್ ಧನ್ಯವಾದ ಹೇಳಿದ್ದಾರೆ.
