Monday, July 28, 2025

spot_img

ಗರುಡ ಗ್ಯಾಂಗ್ ಸದಸ್ಯ ಗೂಂಡಾ ಕಾಯ್ದೆ ಅಡಿ ಬಂಧನ

ಉಡುಪಿ : ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಉಡುಪಿ ಜಿಲ್ಲೆ, ಉಡುಪಿ ಇವರು ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀರ್ ಅಲಿಯಾಸ್ ಕಬೀರ್ ಹುಸೇನ್(46) ಎಂಬಾತನಿಗೆ ಗೂಂಡಾ ಕಾಯ್ದೆ ಅಡಿ ಬಂಧನ ಆದೇಶ ಹೊರಡಿಸಿರುತ್ತಾರೆ.ಗರುಡ ಗ್ಯಾಂಗ್ ಸಕ್ರೀಯ ಸದಸ್ಯನಾದ ಈತನನ್ನು ಬಂಧಿಸಿ ಮೈಸೂರು ಕೇಂದ್ರ ಕಾರಾಗೃಹಕ್ಕೆ ಹಸ್ತಾಂತರಿಸಲಾಗಿದೆ. ಈತ 2005ನೇ ಇಸವಿಯಿಂದ ಇಲ್ಲಿಯ ತನಕ ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು, ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮುಂತಾದ 17 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಇವುಗಳ ಪೈಕಿ ಈಗಾಗಲೇ ಎರಡು ಪ್ರಕರಣಗಳಲ್ಲಿ ಶಿಕ್ಷೆಅನುಭವಿಸಿದ್ದು, 8 ಪ್ರಕರಣಗಳಲ್ಲಿ ಖುಲಾಸೆಯಾಗಿದ್ದಾನೆ. ಉಳಿದಂತೆ ಮೂರು ಪ್ರಕರಣಗಳಲ್ಲಿ ರಾಜಿ ಮಾಡಿಕೊಂಡಿದ್ದು, ಎರಡು ಪ್ರಕರಣಗಳು ನ್ಯಾಯಾಲಯ ವಿಚಾರಣೆಗೆ ಬಾಕಿ ಇದ್ದು, ಉಳಿದ ಎರಡು ಪ್ರಕರಣಗಳು ಪೊಲೀಸ್ ತನಿಖೆಯಲ್ಲಿರುತ್ತದೆ.
ಆರೋಪಿ ಕಬೀರ್ ಹುಸೇನ್ ಉಡುಪಿ ಜಿಲ್ಲೆಯ ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ, ಕಾಪು ಠಾಣೆಗಳ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಕೊಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು, ಮಂಗಳೂರು ನಗರ ವ್ಯಾಪ್ತಿಯ ಸುರತ್ಕಲ್ ಠಾಣೆಯ ಪ್ರಕರಣಗಳಲ್ಲೂ ಭಾಗಿಯಾಗಿದ್ದ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles