Thursday, October 23, 2025

spot_img

ಗುರುವಾರದಂದು ಸಂಜೆ ಕಾಲೇಜಿನಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿ ಶವವಾಗಿ ಪತ್ತೆ

ಕುಂದಾಪುರ: ಗುರುವಾರದಂದು ಸಂಜೆ ಕಾಲೇಜಿನಿಂದ ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿ ಶವವಾಗಿ ಗಂಗೊಳ್ಳಿ ದಾಕುಹಿತ್ಲು ನದಿ ತೀರದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಸಮೇಶ್ (17) ಮೃತಪಟ್ಟ ವಿದ್ಯಾರ್ಥಿ.

ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ,  ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ‌. ಇತ್ತೀಚೆಗೆ ತಂದೆ ಕೊಡಿಸಿದ್ದ ಐ ಪೋನ್ ಮನೆಯಲ್ಲಿಯೇ ಬಿಟ್ಟು, ಬೈಕ್ ಮೂಲಕ ಸಮೇಶ್ ತೆರಳಿದ್ದ. ಬಳಿಕ ಹುಡುಕಾಡಿದಾಗ ಹೆಮ್ಮಾಡಿ ಸಮೀಪದ ಕನ್ನಡ ಕುದ್ರು ನದಿ ತೀರದಲ್ಲಿ ಸಮೇಶ್ ಬೈಕ್ ಮತ್ತು ಕಾಲೇಜು ಬ್ಯಾಗ್ ಪತ್ತೆಯಾಗಿತ್ತು.

ಕುರಿತು ಸಮೇಶ್ ಮನೆಯವರು ಕುಂದಾಪುರ‌ ನಗರ ಠಾಣೆಯಲ್ಲಿ ದೂರು ದಾಖಲಿಸಿ ಹುಡುಕಾಟ ನಡೆಸಿದ್ದಾರೆ.  ಎರಡು ದಿನಗಳ ಕಾಲ ಅಗ್ನಿಶಾಮಕ‌ದಳ ಹಾಗೂ ಗಂಗೊಳ್ಳಿಯ ಈಜುಪಟು ದಿನೇಶ್ ಖಾರ್ವಿ ಹಾಗೂ ಸ್ಥಳೀಯರು ಕನ್ನಡಕುದ್ರು ನದಿಯಲ್ಲಿ ಸಂಜೆಯ ತನಕವೂ ಹುಟುಕಾಟ ನಡೆಸಲಾಗಿತ್ತು.


 ಇಂದು ಶನಿವಾರ ಬೆಳಿಗ್ಗೆ ನಮೇಶ್ ಮೃತದೇಹ ಗಂಗೊಳ್ಳಿ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿ ಸಾವಿಗೆ ಸ್ಪಷ್ಟ ಕಾರಣ ಏನು ಎಂದು ಇದುವರೆಗೂ ತಿಳಿದು ಬಂದಿಲ್ಲಾ, ಪೊಲೀಸ್ ತನಿಖೆ ನಡೆಸಿದ ಬಳಿಕ ಇನ್ನಷ್ಟೆ ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles