Wednesday, June 25, 2025

spot_img

ಗೋಪಾಡಿ ರುಕ್ಮಿಣಿ ನಿವಾಸ ರಂಗಮಂಟಪದ ಉದ್ಘಾಟನೆ

ಕುಂದಾಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಟೇಶ್ವರದ ವಿದ್ಯಾರ್ಥಿಗಳ ಸಾಮಾಜಿಕ ಸಾಂಸ್ಕೃತಿಕ ಚಟುವಟಿಕೆಗಳ ಹಿತ ದೃಷ್ಟಿಯಿಂದ ಗೋಪಾಡಿ ಶ್ರೀನಿವಾಸ್ ರುಕ್ಮಿಣಿ ಫೌಂಡೇಶನ್ ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಕೋಟೇಶ್ವರ ಪ್ರಾಥಮಿಕ ವಿಭಾಗ ಶತಮಾನೋತ್ಸವ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ನಿರ್ಮಿಸಿರುವ ಗೋಪಾಡಿ ರುಕ್ಮಿಣಿ ನಿವಾಸ ರಂಗಮಂಟಪದ ಉದ್ಘಾಟನೆ ಮತ್ತು ಹಸ್ತಾಂತರಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ನುಡಿಗಳನ್ನನಾಡಿದರು.


ಕರ್ನಾಟಕ ರಾಜ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಗೋಪಾಡಿ ರುಕ್ಮಿಣಿ ಶ್ರೀನಿವಾಸ ರಂಗ ಮಂಟಪವನ್ನು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಶೀರ್ವಚನ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಶ್ರೀ ಸೋದೆ ವಾದಿರಾಜ ಮಠ ಉಡುಪಿ ಆಗಮಿಸಿದ ಭಕ್ತಾದಿಗಳಿಗೆ ಆಶೀರ್ವಚನ ಮತ್ತು ಮಂತ್ರಾಕ್ಷತೆ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀಮತಿ ರಾಗಿಣಿ ದೇವಾಡಿಗ ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಟೇಶ್ವರ. ಗೋಪಾಡಿ ಶ್ರೀನಿವಾಸರಾವ್ ಸಂಸ್ಥಾಪಕರು ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್ ಗೋಪಾಡಿ,, ಶ್ರೀಮತಿ ರುಕ್ಮಿಣಿ ಜಿ ಅಧ್ಯಕ್ಷರು ಗೋಪಾಡಿ ಶ್ರೀನಿವಾಸ ರುಕ್ಮಿಣಿ ಫೌಂಡೇಶನ್ ಗೋಪಾಡಿ,, ಶ್ರೀಧರ್ ವಿಠ್ಠಲ್ ಕಾಮತ್ ಅಧ್ಯಕ್ಷರು ಶತಮಾನೋತ್ಸವ ಸಮಿತಿ ಕೆ.ಪಿ.ಎಸ್. ಕೋಟೇಶ್ವರ,, ರಾಜೇಶ್ ಉಡುಪ ಅಧ್ಯಕ್ಷರು ಹಳೆ ವಿದ್ಯಾರ್ಥಿ ಸಂಘ ಕೆ.ಪಿ.ಎಸ್. ಕೋಟೇಶ್ವರ ,, ಶಾಲಾ ವಿದ್ಯಾರ್ಥಿಗಳು,ಹಾಗೂ ಸಮಿತಿಯ ಸದಸ್ಯರು ಊರಿನ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles