ಉಡುಪಿ: ಇತ್ತೀಚೆಗೆ ತಿರುವನಂತಪುರ ಮಹಾನಗರ ಪಾಲಿಕೆಯ ಉಪಮೇಯರ್ ಆಗಿ ಆಯ್ಕೆಯಾಗಿರುವ ಆಶಾ ನಾಥ್ ಜಿ ಎಸ್ ಅವರು ಕುಟುಂಬ ಸಮೇತರಾಗಿ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.

ಇತ್ತೀಚೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿ ದೇಶದ ಗಮನ ಸೆಳೆದಿದ್ದ ಆಶಾ ನಾಥ್ ಜಿ ಎಸ್ ಅವರು ತಿರುವನಂತಪುರದಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆ ಪ್ರಮುಖ ನಾಯಕಿಯಾಗಿ ಹೊರಹೊಮ್ಮಿದ್ದಾರೆ.


ಉಡುಪಿ ಭೇಟಿ ವೇಳೆ ಕೃಷ್ಣ ದರ್ಶನದ ಬಳಿಕ ಅವರು ಪರ್ಯಾಯ ಮಠಾಧೀಶರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಉಡುಪಿ ಶ್ರೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರೊಂದಿಗೆ ಮಾತುಕತೆ ನಡೆಸಿದರು. ಮಠದ ವತಿಯಿಂದ ನೂತನ ಉಪಮೇಯರ್ ಆಶಾ ನಾಥ್ ಜಿ ಎಸ್ ಅವರಿಗೆ ಗೌರವ ಸಲ್ಲಿಸಲಾಯಿತು.



