ಮಲ್ಪೆ : ಭದ್ರತೆ, ಸ್ವಚ್ಚತೆ ಹಾಗೂ ಸಮಗ್ರ ಅಭಿವೃದ್ದಿ ಎಂಬ ದ್ಯೇಯದೊಂದಿಗೆ ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣಾ ಸರಹದ್ದಿಗೆ ಒಳಪಡುವ ದರಿಯಾ ಬಹದ್ದೂರ್ಘಡ (ಲೈಟ್ಹೌಸ್) ದ್ವೀಪ ಹಾಗೂ ಕೋಟೆ ದ್ವೀಪಗಳಿಗೆ ಭೇಟಿ ಪರಿಶೀಲಿಸುವ ಕಾರ್ಯಕ್ರಮ ನಡೆಯಿತು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್.ಕೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಮಿಥುನ್ ಹೆಚ್.ಎನ್, ಐ.ಪಿ.ಎಸ್ ಇವರ ಮಾರ್ಗದರ್ಶನದಲ್ಲಿ ಬಹದ್ದೂರ್ಘಡ (ಲೈಟ್ಹೌಸ್) ದ್ವೀಪ ಹಾಗೂ ಕೋಟೆ ದ್ವೀಪಗಳಿಗೆ ಭೇಟಿ ನೀಡಿ ಪರಿಶೀಲಿಸಲಾಯಿತು.

ಕಾರ್ಯಕ್ರಮದಲ್ಲಿ ಕರಾವಳಿ ಕಾವಲು ಪೊಲೀಸ್ ಉಪಾಧೀಕ್ಷಕ ತುಳಜಪ್ಪ ಸುಲ್ಫಿ, ಸಿ.ಎಸ್.ಪಿ ಕೇಂದ್ರ ಕಛೇರಿಯ ಅಧಿಕಾರಿ ಸಿಬ್ಬಂದಿಗಳು, ಮಲ್ಪೆ ಕರಾವಳಿ ಕಾವಲು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಅಧಿಕಾರಿ ಸಿಬ್ಬಂದಿಯವರು, ಮಲ್ಪೆ ಪೊಲೀಸ್ ಠಾಣಾ ಅಧಿಕಾರಿ ಸಿಬ್ಬಂದಿಯವರು, ಕೆ.ಎನ್.ಡಿ ಸಿಬ್ಬಂದಿಗಳು, ಉಡುಪಿ ನಗರ ಸಭೆಯ ಪೌರಕಾರ್ಮಿಕರು, ಬಂದರು ಇಲಾಖೆಯ ಅಧಿಕಾರಿಗಳು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಸಿಬ್ಬಂದಿಯವರು, ಸ್ಥಳೀಯ ವೈದ್ಯಾಧಿಕಾರಿಗಳು, ಅಗ್ನಿಶಾಮಕದಳದ ಅಧಿಕಾರಿ ಸಿಬ್ಬಂದಿಯವರು, ಅರಣ್ಯ ಇಲಾಖೆಯ ಅಧಿಕಾರಿ ಸಿಬ್ಬಂದಿಯವರು ಹಾಗೂ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಮತ್ತು ಮೀನುಗಾರರ ಸಂಘಟನೆಯ ಪದಾಧಿಕಾರಿಗಳು, ಉರಗ ತಜ್ಞರಾದ ಸ್ನೇಕ್ ಬಾಬಣ್ಣ ಹಾಗೂ ಜಲ ಕ್ರೀಡಾ
ತರಬೇತುದಾರರು ಉಪಸ್ಥಿತರಿದ್ದರು.