ಕೋಟ : ಗಾಂಧೀಜಯವರ ರಾಮರಾಜ್ಯ ಕನಸಿನೊಂದಿಗೆ ಆರಂಭಗೊಂಡ ರಾಷ್ಟ್ರೀಯ ಸೇವಾ ಯೋಜನೆಯು ದೇಶದಲ್ಲಿ ಇಂದು ಅತ್ಯಂತ ದೊಡ್ಡ ಮತ್ತು ಸಕ್ರಿಯ ಸಂಘಟನೆಯಾಗಿದ್ದು, ಯುವ ಜನತೆಯಲ್ಲಿ ಸೇವಾ ಬದ್ಧತೆಯನ್ನು ಉದ್ದೀಪನಗೊಳಿಸಿ, ಸಮಾಜಮುಖಿ ಸಂಘಟನೆಗಳಲ್ಲಿ ತಮ್ಮ ತೊಡಗಿಸಿಕೊಳ್ಳುವಂತೆ ಮಾಡುತ್ತಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಕೋಟ ಪಡುಕರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಮ್ಮಿಕೊಂಡ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ ಮುಖ್ಯ ಅತಿಥಿಯಾಗಿ ಮಾತನಾಡುತ್ತಾ, ಎಳು ದಿನಗಳ ಶಿಬಿರವು
ಪಠ್ಯಕ್ರಮದೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳುವಂತೆ ಮಾಡುತ್ತಿರುವುದು ಅತ್ಯಂತ
ಶ್ಲಾಘನೀಯ. ನಿಮ್ಮ ಒಟ್ಟು ಶಿಸ್ತು, ಸಂಯಮ ಹಾಗು ಕ್ರಿಯಾಶೀಲತೆ ಪ್ರಶಂಸನೀಯ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿ ಉದ್ಯಮಿ ಆನಂದ ಸಿ. ಕುಂದರ್, ಇವರು ಪ್ಲಾಸ್ಟಿಕ್ ಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಶಿಬಿರಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರು ಹಾಗು ಶಿಬಿರದ ನಿರ್ದೇಶಕರಾದ ಡಾ. ರಾಜೇಂದ್ರ ಎಸ್. ನಾಯಕ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹೆಗ್ಗುಂಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಬೇಬಿ ಶೆಟ್ಟಿ, ಮಂದಾರ್ತಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಿಠ್ಠಲ ಶೆಟ್ಟಿ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ. ಪ್ರವೀಣ ಕುಮಾರ ಶೆಟ್ಟಿ, ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯ ಉದಯ ಕುಮಾರ ಶೆಟ್ಟಿ, ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರಸಾದ ಬಿಲ್ಲವ, ನಿವೃತ್ತ ಮುಖ್ಯೋಪಾಧ್ಯಾಯ ಸುಧಾಕರ ಶೆಟ್ಟಿ, ಉದಯ
ಭಾಸ್ಕರ ಶೆಟ್ಟಿ ಹಾಗೂ ಘಟಕದ ನಾಯಕಿ ಸುಪ್ರೀತಾ ಉಪಸ್ಥಿತರಿದ್ಧರು.
ಶಿಬಿರದಲ್ಲಿ, ಪ್ಲಾಸ್ಟಿಕ್ ಬಳಕೆಯ ವಿರುದ್ಧ ಜನಜಾಗೃತಿಯನ್ನು ಮೂಡಿಸಿ, ಪರಿಸರವನ್ನು ಸ್ವಚ್ಚಗೊಳಿಸಲಾಯಿತು, ಹೈಕಿಂಗ್ ಮೂಲಕ ಶಿಬರಾರ್ಥಿಗಳಿಗೆ ಪರಿಸರದ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ಸ್ಕೌಟ್ಸ್ ಎಂಡ್ ಗೈಡ್ಸ್ ತರಬೇತುದಾರರಾದ ಉದಯ ಬಾಸ್ಕರ್ ಶೆಟ್ಟಿ ಇವರು ಜೀವನ ಕೌಶಲ್ಯ ತರಬೇತಿಯನ್ನು ನೀಡಿದರು. ಕಾರ್ಯಕ್ರಮವನ್ನು ತ್ರಿಷಾ ಮತ್ತು ತಂಡದವರ ಯೋಜನಾ
ಗೀತೆಯೊಂದಿಗೆ ಪ್ರಾರಂಭಿಸಲಾಯಿತು. ಸಹ ಶಿಬಿರಾಧಿಕಾರಿ ಸೌಮ್ಯ ಕೆ. ಸ್ವಾಗತಿಸಿದರು, ಕಿರ್ತನಾ ಮತ್ತು ಶಮಿತಾ ಕಾರ್ಯಕ್ರಮ ನಿರ್ವಹಿಸಿದರು. ಶಿಬಿರಾಧಿಕಾರಿ ಡಾ. ಪ್ರಕಾಶ ಕೆ. ವಂದಿಸಿದರು.