ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಹಮ್ಮಿಕೊಂಡ ಲಕ್ಷಕಂಠ ಗೀತಾ ಪಠಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ‘ನವ ಸಂಕಲ್ಪ’ ಮಾಡುವಂತೆ ಮನವಿ ಮಾಡಿದರು. ಎಲ್ಲರೂ ಈ ಒಂಬತ್ತು ಸಂಕಲ್ಪ ಮಾಡಿ, ವರ್ತಮಾನ ಮತ್ತು ಭವಿಷ್ಯಕ್ಕೆ ಇವು ಅಗತ್ಯ ಎಂದು ಒತ್ತಿ ಹೇಳಿದರು.

ಮೊದಲ ಸಂಕಲ್ಪ ಜಲಸಂರಕ್ಷಣೆ ಮಾಡುವುದು. ಎರಡನೇ ಸಂಕಲ್ಪ ಮರ ಬೆಳೆಸುವುದು, ತಾಯಿಯ ಹೆಸರಲ್ಲಿ ಒಂದು ಮರ ಅಭಿಯಾನ ಆರಂಭಿಸಿ. ಮೂರನೇ ಸಂಕಲ್ಪ ಪ್ರತಿಯೊಬ್ಬರೂ ಕನಿಷ್ಠಪಕ್ಷ ಒಬ್ಬ ಬಡವರ ಜೀವನ ಸುಧಾರಿಸಿ.

ನಾಲ್ಕನೇ ಸಂಕಲ್ಪ ಸ್ವದೇಶಿ ಅಳವಡಿಸಿಕೊಳ್ಳಿ, ವೋಕಲ್–ಲೋಕಲ್ ಮಂತ್ರ ನಮ್ಮದಾಗಲಿದೆ. ಐದನೇ ಸಂಕಲ್ಪ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಿ. ಆರನೇ ಸಂಕಲ್ಪ ಆರೋಗ್ಯಪೂರ್ಣ ಜೀವನ ಶೈಲಿ ಅಳವಡಿಸಿಕೊಳ್ಳೋಣ. ಊಟದಲ್ಲಿ ಎಣ್ಣೆ ಕಡಿಮೆ ಮಾಡೋಣ, ಸಿರಿಧಾನ್ಯ ಬಳಸೋಣ.

ಏಳನೇ ಸಂಕಲ್ಪಯೋಗ ಅಳವಡಿಸಿಕೊಳ್ಳಿ, ಎಲ್ಲರೂ ಯೋಗಿಗಳಾಗಿ. ಎಂಟನೇ ಸಂಕಲ್ಪ ಹಸ್ತಪ್ರತಿ ಸಂರಕ್ಷಣೆಗೆ ಸಹಯೋಗ ನೀಡಿ. ಒಂಬತ್ತನೇ ಸಂಕಲ್ಪ ಕನಿಷ್ಠ ಪಕ್ಷ ದೇಶದ 25 ಪುಣ್ಯ ಕ್ಷೇತ್ರಗಳ ದರ್ಶನ ಮಾಡುತ್ತೇನೆ ಎಂಬ ಸಂಕಲ್ಪ ಮಾಡಿ.

2047 ಅಮೃತ ಕಾಲದ ಗುರಿಯನ್ನು ನನಸಾಗಿಸಲು ಭಾರತೀಯರು ಎಲ್ಲರೂ ತಮ್ಮ ಕರ್ತವ್ಯ ನಿಭಾಯಿಸಬೇಕು. ವಿಕಸಿತ ಕರ್ನಾಟಕ; ವಿಕಸಿತ ಭಾರತ ಸಂಕಲ್ಪ ನಮ್ಮದಾಗಲಿ ಎಂದರು.



