Friday, June 27, 2025

spot_img

ಅಂಬಲಪಾಡಿ ಯಕ್ಷಗಾನ ಮಂಡಳಿಯ 67ನೇ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ.

ಉಡುಪಿ: ಕಳೆದ 67 ವರ್ಷಗಳಿಂದ ಹವ್ಯಾಸಿ ಯಕ್ಷಗಾನ ರಂಗಭೂಮಿಯಲ್ಲಿ ವಿಶಿಷ್ಟವಾಗಿ ಕಾರ್ಯನಿರ್ವಸುತ್ತಾ ಬಂದ ಅಂಬಲಪಾಡಿಯ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯ 67ನೇ ವಾರ್ಷಿಕೋತ್ಸವ ಅಂಬಲಪಾಡಿ ದೇವಳದ ಧರ್ಮದರ್ಶಿಗಳಾದ ಡಾ.ನಿ.ಬೀ.ವಿಜಯ ಬಲ್ಲಾಳರ ಅಧ್ಯಕ್ಷತೆಯಲ್ಲಿ ಫೆ 1,2025 ರಂದು ಜನಾರ್ದನ ಮಂಟಪದಲ್ಲಿ ಜರಗಿತು.

ಈ ಸಂದರ್ಭದಲ್ಲಿ ನಿಡಂಬೂರು ಮಾಗಣೆಯ ಸಾಧಕರೂ, ಸಾಮಾಜಿಕ ಬದ್ಧತೆಯ ವೈದ್ಯರೂ ಆದ ಡಾ.ಕೆ.ಆರ್.ಕೆ. ಭಟ್ ಇವರಿಗೆ ನಿಡಂಬೂರು ಬೀಡುಶ್ರೀ ಪ್ರಶಸ್ತಿಯನ್ನು ಡಾ.ಬಲ್ಲಾಳರು ನೀಡಿ ಗೌರವಿಸಿದರು. ಹಿರಿಯ ಯಕ್ಷಗಾನ ಮಂಡಳಿಗೆ ನೀಡಲ್ಪಡುವ ನಿಡಂಬೂರು ಬೀಡು ಬಲ್ಲಾಳ ಪ್ರಶಸ್ತಿಯನ್ನು ಮಾರ್ಪಳ್ಳಿಯ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾ ಮಂಡಳಿಗೆ ಪ್ರದಾನಮಾಡಲಾಯಿತು.ಇದೇ ಸಂದರ್ಭದಲ್ಲಿ ಹಿರಿಯ ಕಲಾವಿದರಾದ ಕರ್ಜೆ ಶ್ರೀಧರ ಹೆಬ್ಬಾರರಿಗೆ ಕಿದಿಯೂರು ಜನಾರ್ದನ ಆಚಾರ್ಯ ಪ್ರಶಸ್ತಿಯನ್ನು, ಹಿರಿಯ ಪ್ರಸಾದನ ತಜ್ಞರಾದ ವಿಠಲ ಕರ್ಕೇರರಿಗೆ ಕಪ್ಪೆಟ್ಟು ಬಾಬು ಶೆಟ್ಟಿಗಾರ ಪ್ರಶಸ್ತಿಯನ್ನು,ಕುತ್ಪಾಡಿ ಆನಂದಗಾಣಿಗ ಪ್ರಶಸ್ತಿಯನ್ನು ಬೆಳ್ತೂರು ರಮೇಶ್ ಇವರಿಗೆ ನೀಡಿ ಗೌರವಿಸಲಾಯಿತು. ಅಭ್ಯಾಗತರಾಗಿ ಹಿರಿಯ ವೈದ್ಯಾಧಿಕಾರಿಗಳಾದ ಪ್ರಶಾಂತ್ ಶೆಟ್ಟಿಯವರು ಸಮಾರಂಭದಲ್ಲಿ ಪಾಲ್ಗೊಂಡು ಶುಭಾಶಂಸನೆಗೈದರು.ಮಂಡಳಿಯ ಅಧ್ಯಕ್ಷ ಕೆ.ಅಜಿತ್ ಕುಮಾರ್ ಸ್ವಾಗತಿಸಿದರು. ಕೋಶಾಧಿಕಾರಿ ಎ.ನಟರಾಜ್ ಉಪಾಧ್ಯ ನಿರ್ವಹಿಸಿದ ಕಾರ್ಯಕ್ರಮದಲ್ಲಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಎ.ಪ್ರವೀಣ್ ಉಪಾಧ್ಯ ಧನ್ಯವಾದ ಸಮರ್ಪಿಸಿದರು. ಬಳಿಕ ಮಂಡಳಿಯ ಬಾಲ ಕಲಾವಿದರಿಂದ ವೀರ ತರಣಿಸೇನ ಮತ್ತು ಮಂಡಳಿಯ ಸದಸ್ಯರಿಂದ ವೀರ ಬರ್ಬರೀಕ ಯಕ್ಷಗಾನ ಪ್ರದರ್ಶನಗೊಂಡಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles