Monday, June 30, 2025

spot_img

ಅಕ್ರಮ ಗಣಿಗಾರಿಕೆ ಗಣಿ ಭೂವಿಜ್ಞಾನಿಗಳು ದಾಳಿ..

ಕೋಟ : ಅಕ್ರಮ ಗಣಿಗಾರಿಕೆಯ ಮೇಲೆ ಗಣಿ ಭೂವಿಜ್ಞಾನಿಗಳು ದಾಳಿ ನಡೆಸಿ ಪ್ರಕರಣ ದಾಖಲಿಸಿದ ಘಟನೆ ಶಿರಿಯಾರದಲ್ಲಿ ನಡೆದಿದೆ. ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಶಿರಿಯಾರ ಗ್ರಾಮದ ಹೆಬ್ಬಾರ್‌ಬೆಟ್ಟು ಎನ್ನುವಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎನ್ನುವ ದೂರಿನ ಮೇರೆ ಧಾಳಿ ಮಾಡಲಾಗಿದೆ.

ದಾಳಿಯ ಸಂದರ್ಭ ರಾಜಧನ ಪಾವತಿಸದೇ ಗಣಿಗಾರಿಕೆ ನಡೆಸುತ್ತಿದದ್ದು ಗಮನಕ್ಕೆ ಬಂದಿದ್ದು, ವಿರೇಂದ್ರ ಎಂಬಾತನನ್ನು ವಶಕ್ಕೆ ಪಡೆದಿದ್ದು, ಇನ್ನೊಬ್ಬ ಆರೋಪಿ ಸುಧೀಂದ್ರ ಸ್ಥಳದಿಂದ ಪರಾರಿಯಾಗಿದ್ದಾನೆ. ಭೂವಿಜ್ಞಾನಿ ಅಶ್ವಿನಿ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ತಂಡ ಧಾಳಿ ನಡೆಸಿದ್ದು, ಈ ಕುರಿತು ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles