ಉಡುಪಿ : ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು, ಬೈಕ್ ಸವಾರನೋರ್ವ ಸ್ಥಳದಲ್ಲೆ ಮೃತಪಟ್ಟ ಘಟನೆ ಉಚ್ಚಿಲದಲ್ಲಿ ನಡೆದಿದೆ. ಮಂಗಳವಾರ ಮುಂಜಾನೆ ವೇಳೆಗೆ ಈ ಘಟನೆ ನಡೆದಿದ್ದು, ಮೃತ ಬೈಕ್ ಸವಾರನ ತಲೆ ಜಜ್ಜಿ ಹೋಗಿದ್ದು ಇನ್ನೂ ಗುರುತು ಪತ್ತೆಯಾಗಿಲ್ಲ.

ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಪುತ್ತೂರು ನೋಂದಣಿ ಇರುವ ಬೈಕಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ, ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಡುಬಿದ್ರೆ ಪೊಲೀಸ್ ರು ಸ್ಥಳಕ್ಕೆ ಆಗಮಿಸಿದ್ದು, ಮೃತನ ಪತ್ತೆಗಾಗಿ ವಿಚಾರಣೆ ನಡೆಸುತ್ತಿದ್ದಾರೆ.