ಕಾರ್ಕಳ : ಅರಣ್ಯ ಇಲಾಖೆ ಕುದುರೆಮುಖ ವನ್ಯಜೀವಿ ವಿಭಾಗದ ಕಾರ್ಕಳ ಕೇಂದ್ರ ಕಛೇರಿಯ ಅಧೀಕ್ಷಕ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾರ್ಕಳ ಕೇಂದ್ರ ಕಚೇರಿಯ ಅಧೀಕ್ಷಕರಾಗಿದ್ದ ಹರಿಪ್ರಸಾದ್ (58) ಅನಾರೋಗ್ಯದಿಂದ ಮೃತಪಟ್ಟವರು. ಇತ್ತೀಚೆಗೆ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, ಪುತ್ರ ಮತ್ತು ಪುತ್ರಿ ಅಗಲಿದ್ದಾರೆ.

ಮೃತರು ಬೆಳ್ತಂಗಡಿ ತಾಲೂಕಿನ ವೇಣೂರು ಮೂಲದವರಾಗಿದ್ದು, ಪ್ರಸ್ತುತ ಕಾರ್ಕಳ ಕಂಬಳಬೆಟ್ಟುವಿನಲ್ಲಿ ವಾಸವಿದ್ದರು. ಹರಿಪ್ರಸಾದ್ ಅರಣ್ಯ ಇಲಾಖೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ, ವಿವಿಧ ಹುದ್ದೆಗಳನ್ನು ನಿಭಾಯಿಸಿ, ಅಧೀಕ್ಷಕರ ಹುದ್ದೆಗೆ ಪದೋನ್ನತಿ ಹೊಂದಿದ್ದರು. ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದಾರೆ, ಕರ್ತವ್ಯ ನಿಷ್ಠೆಯ ಮೂಲ ಸಹದ್ಯೋಗಿಗಳ ಮೆಚ್ಚುಗೆ ಪಡೆದಿದ್ದರು.