Sunday, June 29, 2025

spot_img

ಉಡುಪಿ-ಪ್ರಯಾಗ್‌ ರಾಜ್‌ ವಿಶೇಷ ರೈಲು ಮುಂಗಡ ಬುಕ್ಕಿಂಗ್‌ ಫುಲ್…

ಉಡುಪಿ : ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಕರಾವಳಿಯ ಯಾತ್ರಾರ್ಥಿಗಳಿಗಾಗಿ ಒದಗಿಸಲಾದ ವಿಶೇಷ ರೈಲಿನ ಮುಂಗಡ ಟಿಕೆಟ್ ಬುಕ್ಕಿಂಗ್‌, ಕೇವಲ 15 ನಿಮಿಷಗಳಲ್ಲಿ ಎಲ್ಲ ಸೀಟುಗಳು ಭರ್ತಿಯಾಗಿವೆ. ಫೆ.14ರ ಮಧ್ಯಾಹ್ನ 1 ಗಂಟೆ ಸುಮಾರಿಗೆ ವಿಶೇಷ ರೈಲಿನ ಮುಂಗಡ ಟಿಕೆಟ್ ಬುಕ್ಕಿಂಗ್‌ ಅವಕಾಶ ಮಾಡಿಕೊಡ ಲಾಗಿತ್ತು.


ಬೆಳಗ್ಗೆ 8 ಗಂಟೆಯಿಂದಲೇ ಇಂದ್ರಾಳಿ ರೈಲು ನಿಲ್ದಾಣ ಸಹಿತ ಜಿಲ್ಲೆಯ ವಿವಿಧ ರೈಲು ನಿಲ್ದಾಣಗಳಲ್ಲಿ ಮುಂಗಡ ಟಿಕೆಟ್ ಬುಕ್ಕಿಂಗ್‌ಗಾಗಿ ಯಾತ್ರಾರ್ಥಿಗಳು ಕಾದು ಕುಳಿತಿದ್ದರು. ಮಧ್ಯಾಹ್ನ 1 ಗಂಟೆಗೆ ಬುಕ್ಕಿಂಗ್ ತೆರೆದು 1.15ರೊಳಗೆ ಬಂದ್ ಆಗಿರುವುದರಿಂದಲೂ ಟಿಕೆಟ್ ಸಿಕ್ಕಿರಲಿಲ್ಲಾ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕೊಂಕಣ್ ರೈಲ್ವೇ ಅಧಿಕಾರಿಗಳು ದಿಲ್ಲಿಗೆ ನಿರಂತರ ಸಂಪರ್ಕ ಬೆಳೆಸಿದ ಫಲವಾಗಿ ರಾತ್ರಿ 8 ಗಂಟೆ ಸುಮಾರಿಗೆ ಬುಕ್ಕಿಂಗ್ಗೆ ಅವಕಾಶ ನೀಡಲಾಗಿದ್ದು, ಆ ವೇಳೆಗೆ ರೈಲು ನಿಲ್ದಾಣದ ಬುಕ್ಕಿಂಗ್ ಕೌಂಟರ್ ಗಳು ಮುಚ್ಚಿದ್ದವು. ಹೀಗಾಗಿ ಆನ್‌ಲೈನ್ ನಲ್ಲಿ ಮಾತ್ರ ಅವಕಾಶ ನೀಡಲಾಗಿತ್ತು.

ಇದರಿಂದಲೂ ಒಂದಿಷ್ಟು ಮಂದಿ ಗೊಂದಲಕ್ಕೆ ಒಳಗಾಗಿದ್ದರು. ಪ್ರಯಾಗ್ ರಾಜ್‌ಗೆ ಹೋಗಲು ಮುಂಗಡ ಟಿಕೆಟ್ ಕಾದಿರಿಸಿದ್ದಹಲವರಿಗೆ ವಾಪಸ್ ಬರಲು ಟಿಕೆಟ್ ಸಿಕ್ಕಿರಲಿಲ್ಲ.ಫೆ.17ರ ಮಧ್ಯಾಹ್ನ 12.30ಕ್ಕೆ ಉಡುಪಿಯಿಂದ ಹೊರಡುವ ಈ ರೈಲು ಫೆ.19ರ ಬೆಳಗ್ಗೆ ಪ್ರಯಾಗ್ ರಾಜ್ ತಲುಪಲಿದೆ. ಫೆ.20ರ ಸಂಜೆ 6ಕ್ಕೆ ಅಲ್ಲಿಂದ ಹೊರಟು ಫೆ.22ರ ಸಂಜೆ ಉಡುಪಿ ತಲುಪಲಿದೆ. ಇದರಲ್ಲಿ 20 ಕೋಚ್‌ಗಳಿದ್ದು ಅದರಲ್ಲಿ 6 ಎಸಿ, 10 ಸ್ವೀಪರ್, 2 ಜನರಲ್ ಹಾಗೂ 2 ಎಸ್ ಎಲ್‌ಆರ್ ಕೋಚ್ ಸೇರಿದೆ ಎಂದು ಕೊಂಕಣ ರೈಲು ಪ್ರಕಟನೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles