ಕುಂದಾಪುರ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಅಮಾಸೆಬೈಲು ಪೂರ್ವ ಪ್ರಾಥಮಿಕ ವಿಭಾಗದ l.K.G ಹಾಗೂ, UKG ತರಗತಿಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಸಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಎಲ್ ಕೆ ಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಗೀತಾನಂದ ಫೌಂಡೇಶನ್ ಕೋಟೇಶ್ವರ ಇವರು ಕೊಡ ಮಾಡಿದ ವಸ್ತುಗಳನ್ನು ಹಸ್ತಾಂತರಿಸಿ.ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ RFO ರೂಪೇಶ್, ಹಾಗೂ ಅಮಾಸೆಬೈಲು ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಮಲ್ಲಿಕಾ ಕುಲಾಲ್, ಸದಸ್ಯರಾದ ಸುಮತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಸದಾನಂದ ಶೆಟ್ಟಿ ರಟ್ಟಾಡಿ, ಡಿ.ಡಿ.ಪಿ. ಅಶೋಕ ಕಾಮತ್, ಗೀತಾನಂದಾ ಫೌಂಡೇಶನ್ ಅಧ್ಯಕ್ಷರಾದ ಶಂಕರ್ ಐತಾಳ್, ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀಧರ್ ಶೆಟ್ಟಿ, ದಾನಿಗಳಾದ ಮುಸ್ತಾಪ್, ಸಿ.ಆರ್. ಪಿ .ಶೇಖರ್ ಯು,, ಶಾಲಾ ಮುಖ್ಯೋಪಾಧ್ಯಾಯರಾದ ಶಶಿಧರ್ ಶೆಟ್ಟಿ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಸುಕೇಶ್ ಭಂಡಾರಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನವೀನ್ ಚಂದ್ರ ಶೆಟ್ಟಿ, , ಶಾಲಾ ಶಿಕ್ಷಕ ವೃಂದದವರು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು, ಹಳೆ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು, ಪುಟಾಣಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
