Sunday, June 29, 2025

spot_img

ಕರಾವಳಿ ಕರ್ನಾಟಕದಲ್ಲಿ ಪ್ರವಾಸೋದ್ಯಮ ಮೂಲ ಸೌರ್ಕಯವನ್ನು ಹೆಚ್ಚಿಸಬೇಕು: ಎಂ.ಜಿ. ಬಾಲಕೃಷ್ಣ

ಉಡುಪಿ: ಸಿಲಿಕಾನ್ ಸರ್ಫ್ -25 ಪರಿಕಲ್ಪನೆಯ ಡಿಜಿಟಲ್ ಕ್ರಾಂತಿಯ ಮೂಲಕ ಸ್ಥಳೀಯ ಯುವಜನತೆಯ ಸಬಲೀಕರಣ ಮತ್ತು ಉದ್ಯೋಗ ಸೃಷ್ಠಿ ಮಾಡುವುದು ನಮ್ಮ ಉದ್ದೇಶವಾಗಿದೆ. ಅದಕ್ಕಾಗಿ ಎಐ- ಫಿನ್ಟೆಕ್, ಇ ಕಾಮರ್ಸ್ ಮತ್ತು ಡಿಜಿಟಲ್ ಸೇವೆಗಳತ್ತ ಗಮನ ಹರಿಸಬೇಕು. ಐಟಿ ಪಾರ್ಕ್ ಸ್ಥಾಪನೆ, ಟೆಕ್ ಸ್ಟಾರ್ಟ್ ಅಪ್ ಗಳನ್ನು ಆಕರ್ಷಿಸಬೇಕಾಗಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ತಿಳಿಸಿದ್ದಾರೆ.

ಮಣಿಪಾಲದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಮತ್ತು ಕರಾವಳಿ ಕರ್ನಾಟಕ ವ್ಯಾಪಾರ ಸಮುದಾಯವು ಸರಕಾರವು ವ್ಯಾಪಾರ ಮತ್ತು ಕೈಗಾರಿಕೆಗಳಿಗೆ ಅನುಕೂಲರ ವಾತಾವಣವನ್ನು ಸೃಷ್ಠಿಸ ಬೇಕಾಗಿದೆ. ಮೀನುಗಾರಿಕೆ, ಕೃಷಿ ಸಂಸ್ಕರಣೆ ಮತ್ತು ಸಾಗರ ರಪ್ತುಗಳಿಗೆ ಅಗತ್ಯವಾದ ನೀತಿ ಬೇಕಾಗಿದೆ. ಅದೇ ರೀತಿ ಕೈಗಾರಿಕ ಕಾರಿಡಾರ್‌ಗಳನ್ನು ಬಲಪಡಿಸಬೇಕು ಎಂದವರು  ಒತ್ತಾಯಿಸಿದರು.

ಕರಾವಳಿ ಕರ್ನಾಟಕದಲ್ಲಿ ಪ್ರವಾಸೋದ್ಯಮ ಮೂಲ ಸೌರ್ಕಯವನ್ನು ಹೆಚ್ಚಿಸಬೇಕು. ರಾಜ್ಯ ಸರಕಾರ ತನ್ನ ಪ್ರವಾಸೋದ್ಯಮ ಕರಡು ನೀತಿಯಲ್ಲಿ ಉಡುಪಿ ಮತ್ತು ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮೂಲ ಸೌಕರ್ಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಉತ್ತಮ ರಸ್ತೆ ಜಾಲಗಳು, ವಿಮಾನ ನಿಲ್ದಾಣ ಮತ್ತು ರೈಲು ಸಂಪರ್ಕಗಳನ್ನು ಅಭಿವೃದ್ಧಿಪಡಿಸಬೇಕು ಎಂದರು. 

ಕರಾವಳಿ ಕರ್ನಾಟಕದಲ್ಲಿ ಕೈಗಾರಿಕಾ ಕ್ಲಸ್ಟರ್ ಹಾಗೂ ಡಿಜಿಟಲ್ ಉದ್ಯಮಶೀಲತೆಗಳನ್ನು ಉತ್ತೇಜಿಸಲು ಮತ್ತು ಪ್ರವಾಸೋದ್ಯಮ ಅವಕಾಶಗಳನ್ನು ವಿಸ್ತರಿಸುವ ಕುರಿತು ಶೀಘ್ರವೇ ರಾಜ್ಯ ಸರಕಾರದೊಂದಿಗೆ ಚರ್ಚಿಸಲಾಗುವುದು. ಅದೇ ರೀತಿ ಕೈಗಾರಿಕಾ ನೀತಿಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಸರಳೀಕರಣ ಮಾಡುವ ಕುರಿತು ಪ್ರಯತ್ನ ಮಾಡಲಾಗುವುದು ಎಂದು ನುಡಿದರು. 

ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ.ನಾಯಕ್, ಮಹಾಸಂಸ್ಥೆಯ ಉಪಾಧ್ಯಕ್ಷೆ ಉಮಾ ರೆಡ್ಡಿ, ನಿಕಟಪೂರ್ವ ಅಧ್ಯಕ್ಷ ರಮೇಶ್‌ಚಂದ್ರ ಲಹೋಟಿ, ಉಡುಪಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಮ್ಮುಂಜೆ ಪ್ರಭಾಕರ ನಾಯಕ್, ಕಾರ್ಯದರ್ಶಿ ಡಾ.ವಿಜಯೇಂದ್ರ ರಾವ್, ಜಿಲ್ಲಾ ಸಮನ್ವಯ ಸಮಿತಿ ಚೇಯರ್‌ಮೆನ್ ಅಂಡಾರು ದೇವಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles