ಉಡುಪಿ : ರಾಜ್ಯದಲ್ಲಿನ ಪ್ರಸ್ತುತ ಕೆಲವೊಂದು ಬೆಳವಣಿಗೆ ಹಿನ್ನಲೆಯಲ್ಲಿ ಸರಕಾರ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಅಸ್ತ್ರ ಮುಂದು ತಂದಿದೆ. ಮುಖ್ಯವಾಗಿ ಸರಣಿ ಕೊಲೆಗಳ ಮೂಲಕ ರಾಜ್ಯದಲ್ಲಿ ಹಾಟ್ ಸ್ಪಾಟ್ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು ಆರ್ಥಿಕ ಅಪರಾಧಗಳ ಉಪ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ.

ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರನ್ನು ವರ್ಗಾವಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

ಇನ್ನು ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಹರಿರಾಮ್ ಶಂಕರ್ ಐಪಿಎಸ್ ಅವರನ್ನು ಸರಕಾರ ನೇಮಿಸಿ ಆದೇಶ ಹೊರಡಿಸಿದೆ.

ಮಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಸುಧೀರಕುಮಾರ್ ರೆಡ್ಡಿ ಅಧಿಕಾರ ಸ್ವೀಕರಿಸಲಿದ್ದಾರೆ.