Saturday, June 28, 2025

spot_img

ಕರ್ನಾಟಕ ರಕ್ಷಣಾ ವೇದಿಕೆ : ಉಚಿತ ಆರೋಗ್ಯ ತಪಾಸಣೆ ಶಿಬಿರ

ಉಡುಪಿ : ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲೆಯ 76ನೇ ಗಣರಾಜ್ಯೋತ್ಸವ ಪ್ರಯುಕ್ತ ಆಯೋಜಿಸಲಾದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಕಾಂಗ್ರೆಸ್‌ ಮುಖಂಡ ಪ್ರಸಾದ್ ರಾಜ್ ಕಾಂಚನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಪರವಾಗಿ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣ ಗೌಡ ಸಂಘಟನೆ ಕರ್ನಾಟಕದಲ್ಲಿ ಅತ್ಯುತ್ತಮವಾಗಿ ಕನ್ನಡವನ್ನು ಕರ್ನಾಟಕದಲ್ಲಿ ಬೆಳೆಸಿಕೊಂಡು ಹೋಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ಪರವಾಗಿ ನಾನಿದ್ದೇನೆ ಎಂದು ಭರವಸೆ ನೀಡಿದರು.

ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಉಪಾಧ್ಯಕ್ಷರಾದ ಗೋಪಾಲ್ ದೊರೆ, ಉಡುಪಿ ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಗೀತಾ ಪಾಂಗಾಳ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಲ್ಫೋನ್ಸ್,
ಜಿಲ್ಲಾ ಕಾರ್ಯದರ್ಶಿಯಾದ ಸಿದ್ದಣ್ಣ, ಜಿಲ್ಲಾ ಸಾಂಸ್ಕೃತಿ ಕಾರ್ಯದರ್ಶಿ ಎಸ್ ಕೃಷ್ಣ, ಜಿಲ್ಲಾ ಕಾರ್ಯದರ್ಶಿ ವಿಜಯ್ ಪೂಜಾರಿ, ಉಡುಪಿ ಜಿಲ್ಲಾ ಜಾಲತಾಣ ಸಂಚಾಲಕರಾದ ರಶ್ಮಿ, ಕಾಪು ತಾಲೂಕು ಮಹಿಳಾ ಘಟಕದ ಅಧ್ಯಕ್ಷ ಶಶಿಕಲಾ ನವೀನ್ ಹಾಗೂ ಜಿಲ್ಲಾ ಸದಸ್ಯರುಗಳು ಮತ್ತು ತಾಲೂಕು ಸದಸ್ಯರುಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles