Saturday, June 28, 2025

spot_img

ಕಾರು ಮತ್ತು ಟಿಪ್ಪರ್ ಡಿಕ್ಕಿ: ಚಾಲಕ ಮೃತ

ಕಾಪು: ಕಾರು ಮತ್ತು ಟಿಪ್ಪರ್ ಡಿಕ್ಕಿಯಾದ ಪರಿಣಾಮ ಟಿಪ್ಪ‌ರ್ ಅಡಿಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ಕಾಪು ತಾಲೂಕಿನ ಶಂಕರಪುರ ದುರ್ಗಾ ನಗರ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಟಿಪ್ಪರ್ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ ನಾಯ್ಕ್ (55) ಎಂದು ಗುರುತಿಸಲಾಗಿದೆ.

ಕಟಪಾಡಿ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾಗಿದ್ದು, ಇದರ ಅಡಿಯಲ್ಲಿ ಸಿಲುಕಿದ ಚಾಲಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಅತಿ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles