Friday, June 27, 2025

spot_img

ಕಾರು ಮರಕ್ಕೆ ಡಿಕ್ಕಿ, ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

ಬ್ರಹ್ಮಾವರ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಸಮೀಪ ಕಾಡುರೂನಲ್ಲಿ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಬೀಜಾಡಿಯ ಜಯಲಕ್ಷ್ಮೀ(68) ಎಂದು ಗುರುತಿಸಲಾಗಿದೆ.ಗಂಭೀರ ಗಾಯಗೊಂಡ ರಾಮಚಂದ್ರ ಭಟ್, ಸುಜಾತಾ, ಮಂಗಳ, ಪ್ರೇಮಾ ಇವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಬ್ಬಿನಾಲೆ ಜಾತ್ರೆ ಮುಗಿಸಿ ಈ ಐವರು ಕಾರಿನಲ್ಲಿ ಬೆಳಿಗ್ಗೆ ಮಂದಾರ್ತಿ, ಸಾಲಿಗ್ರಾಮ, ಹಾಗೂ ಕೋಟ ಅಮೃತೇಶ್ವರಿ ದೇವಸ್ಥಾನಕ್ಕೆಂದು ಬರುತ್ತೀದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles