Thursday, June 26, 2025

spot_img

ಗೀತಾ ಮಂದಿರದಲ್ಲಿ ಯಕ್ಷಶಿಕ್ಷಣ ಟ್ರಸ್ಟಿನ ವಾರ್ಷಿಕ ಮಹಾಸಭೆ

ಉಡುಪಿ : ಗೀತಾ ಮಂದಿರದಲ್ಲಿ ಯಕ್ಷಶಿಕ್ಷಣ ಟ್ರಸ್ಟಿನ ವಾರ್ಷಿಕ ಮಹಾಸಭೆಯು ಪರ್ಯಾಯ ಮಠಾಧೀಶರಾದ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ಜರಗಿತು. ಶಾಸಕರು, ಟ್ರಸ್ಟ್ನ ಅಧ್ಯಕ್ಷರೂ ಆದ ಯಶ್‌ಪಾಲ್ ಎ. ಸುವರ್ಣ ಮತ್ತು ದಿವಾನರಾದ ನಾಗರಾಜ ಆಚಾರ್ಯ ಉಪಸ್ಥಿತಿಯಲ್ಲಿ ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿ, ಅನುಮೋದಿಸಲಾಯಿತು.

ಬಳಿಕ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಯಕ್ಷಗಾನ ಗುರುಗಳ ಪ್ರಥಮ ಸಭೆ ಶಾಸಕರ ಉಪಸ್ಥಿತಿಯಲ್ಲಿ ಜರುಗಿತು. ಉಡುಪಿ, ಕಾಪು, ಕುಂದಾಪುರ, ಬೈಂದೂರು ವಿಧಾನಸಭಾ ಕ್ಷೇತ್ರಗಳ 92 ಪ್ರೌಢಶಾಲೆಗಳಿಗೆ 40 ಗುರುಗಳನ್ನು ಯಕ್ಷಗಾನ ಕಲಿಸಲು ನಿಯುಕ್ತಿಗೊಳಿಸಲಾಯಿತು. ಯಕ್ಷಶಿಕ್ಷಣ ಒಂದು ಅಪೂರ್ವ ಯೋಜನೆ, ಇದಕ್ಕೆ ತನ್ನ ಸಂಪೂರ್ಣ ಸಹಕಾರವಿದೆ ಎಂಬುದಾಗಿ ಶಾಸಕರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಕಾರ್ಯದರ್ಶಿ ಮುರಲಿ ಕಡೆಕಾರ್ ಗುರುಗಳಿಗೆ ವಿಶೇಷ ಸೂಚನೆಗಳನ್ನು ನೀಡಿದರು. ಟ್ರಸ್ಟ್ನ ವಿಶ್ವಸ್ಥರಾದ ಎಂ.ಗಂಗಾಧರ ರಾವ್, ನಾರಾಯಣ ಎಂ. ಹೆಗಡೆ, ವಿ. ಜಿ. ಶೆಟ್ಟಿ, ಮೀನಾ ಲಕ್ಷ್ಮಣಿ ಅಡ್ಯಂತಾಯ, ನಟರಾಜ ಉಪಾಧ್ಯ, ನಾಗರಾಜ ಹೆಗಡೆ, ಯು. ಎಸ್. ರಾಜಗೋಪಾಲ ಆಚಾರ್ಯ, ಅನಂತರಾಜ ಉಪಾಧ್ಯ, ನಿರಂಜನ ಭಟ್ ಉಪಸ್ಥಿತರಿದ್ದರು. ನೂತನ ಕೋಶಾಧಿಕಾರಿ ಗಣೇಶ ಬ್ರಹ್ಮಾವರ ಸಹಕರಿಸಿದರು. ಆರಂಭದಲ್ಲಿ, ಟ್ರಸ್ಟಿನ ಸದಸ್ಯರಾಗಿ, ಕೋಶಾಧಿಕಾರಿಯಾಗಿ ವಿಶೇಷ ಸೇವೆ ಸಲ್ಲಿಸಿ, ನಮ್ಮನ್ನಗಲಿದ ಎಚ್. ಎನ್. ಶೃಂಗೇಶ್ವರ ಹಾಗೂ ಪ್ರೊ. ಎಚ್.ಕೃಷ್ಣ ಭಟ್ ಇವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles