Sunday, June 29, 2025

spot_img

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯ ವ್ಯಾಪ್ತಿ ಮುಷ್ಕರದ ಸ್ಥಳಕ್ಕೆ : ಶಾಸಕ ಎ. ಕಿರಣ್ ಕೊಡ್ಗಿ ಭೇಟಿ

ಕುಂದಾಪುರ: ಕುಂದಾಪುರ ತಾಲೂಕು ಕಚೇರಿಯ ಮುಂಭಾಗದಲ್ಲಿ ಹಲವು ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ರಾಜ್ಯ ವ್ಯಾಪಿ ಎರಡನೇ ಹಂತದ ಧರಣಿ ನಡೆಸುತ್ತಿದ್ದು, ಧರಣಿ ನಡೆಯುವ ಸ್ಥಳಕ್ಕೆ ಇಂದು ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿದರು.

ಕುಂದಾಪುರ ತಾಲೂಕು ಕಚೇರಿ ವ್ಯಾಪ್ತಿಯ ಕುಂದಾಪುರ ಹಾಗೂ ವಂಡ್ಸೆ ಹೋಬಳಿ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಇವರ ನೇತೃತ್ವದಲ್ಲಿ ಮೂಲಭೂತ ಸೌಕರ್ಯಗಳ ಬೇಡಿಕೆ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಅವರ ಬೇಡಿಕೆಯಾದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತವಾದ ಕಚೇರಿ, ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ ಅಲ್ಮೆರಾ, ಪ್ರಿಂಟರ್ ಮತ್ತು ಸ್ಕ್ಯಾನರ್, ಲ್ಯಾಪ್ಟಾಪ್ ಹಾಗೂ ಎಲ್ಲಾ ಸರಕಾರದ ಕೆಲಸಗಳು ಮೊಬೈಲ್ ಆಪ್ ಗಳ ಮೂಲಕ ಆಗಬೇಕಾಗಿರುವುದರಿಂದ ಉತ್ತಮ ಗುಣಮಟ್ಟದ ಮೊಬೈಲ್ ಒಂದಿಗೆ ಆಡಳಿತ ಅಧಿಕಾರಿಗಳ ಹುದ್ದೆಯಿಂದ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡುವಂತೆ ಬೇಡಿಕೆ ಇಟ್ಟು ಮುಷ್ಕರ ಆರಂಭಿಸಲಾಗಿತ್ತು.

ಧರಣಿ ನಿರತ ಗ್ರಾಮ ಆಡಳಿತ ಅಧಿಕಾರಿಗಳ ಮಾತನಾಡಿ ಅವರ ಮೂಲಭೂತ ಸೌಕರ್ಯ ಹಾಗೂ ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಾನ ಸಭೆಯ ಅಧಿವೇಶನದಲ್ಲಿ ಚರ್ಚಿಸಿದ್ದು ಇನ್ನೊಮ್ಮೆ ಸರಕಾರದ ಗಮನಕ್ಕೆ ತಂದು ಸಂಬಂಧಪಟ್ಟ ಕಂದಾಯ ಸಚಿವರೊಂದಿಗೆ ಚರ್ಚಿಸಿ ಶೀಘ್ರವಾಗಿ ತಮ್ಮ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ಶಾಸಕರು ನೀಡಿದರು. ಈ ಸಂದರ್ಭದಲ್ಲಿ ಕುಂದಾಪುರ ಪುರಸಭೆ ಸದಸ್ಯ ಸಂತೋಷ್ ಕುಮಾರ್ ಶೆಟ್ಟಿ, ಶಾಸಕರ ಆಪ್ತ ಕಾರ್ಯದರ್ಶಿ ಮಹಿಮ ಶೆಟ್ಟಿ. ಕೆ., ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles