Wednesday, April 9, 2025

spot_img

ಟಿಪ್ಪರ್ – ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ

ಬ್ರಹ್ಮಾವರ: ಪೇತ್ರಿ ಜಂಕ್ಷನ್ ಬಳಿ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒರ್ವ ಯುವಕ ಮೃತಪಟ್ಟು ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತ ಯುವಕನನ್ನು ಸಾಸ್ತಾನ, ಐರೋಡಿ ಗೋಳಿಬೆಟ್ಟು ನಿವಾಸಿ ದೀಕ್ಷಿತ್ (24) ಎಂದು ಗುರುತಿಸಲಾಗಿದೆ. ಸಹ ಸವಾರ ಅಭಿಷೇಕ್ ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟಿಪ್ಪರ್ ಬ್ರಹ್ಮಾವರದಿಂದ ಕುಕ್ಕೆಹಳ್ಳಿ ಕಡೆಗೆ ಹೋಗುವ ಸಲುವಾಗಿ ಪೇತ್ರಿ ಜಂಕ್ಷನ್ ನಲ್ಲಿ ಬಲಕ್ಕೆ ತಿರುಗುವ ವೇಳೆ ಹೆಬ್ರಿ ಕಡೆಯಿಂದ ಬ್ರಹ್ಮಾವರಕ್ಕೆ ಹೋಗುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಸ್ಕೂಟರ್‌ ನಲ್ಲಿದ್ದ ಸವಾರ ಮತ್ತು ಸಹ ಸವಾರ ಇಬ್ಬರೂ ಕೂಡ ರಸ್ತೆಗೆ ಬಿದ್ದ ಪರಿಣಾಮ, ತಲೆಗೆ ಏಟಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ತೀವ್ರತೆಗೆ ದೀಕ್ಷೀತ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅಭಿಷೇಕ್ ಗಂಭೀರ ಗಾಯಗಳೊಂದಿಗೆ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles