Thursday, June 19, 2025

spot_img

ಡಾ. ಆರ್. ಗಣೇಶ ಅವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ

ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ, ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ವಿದ್ವಾಂಸರಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ನಾಡಿನ ಹಿರಿಯ ಬಹುಶ್ರುತ ವಿದ್ವಾಂಸ, ಬಹುಭಾಷಾ ವಿಶಾರದ, ಏಕವ್ಯಕ್ತಿ ಯಕ್ಷಗಾನದ ಹರಿಕಾರ, ಹಲವವು ಶ್ರೇಷ್ಠ ಗ್ರಂಥಗಳನ್ನು ಸಾರಸ್ವತ ಲೋಕಕ್ಕೆ ನೀಡಿ ವಿದ್ವಜ್ಜನ ಗೌರವಕ್ಕೆ ಭಾಜನರಾದ ಶತಾವಧಾನಿ ಡಾ. ಆರ್. ಗಣೇಶ್ ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭ ಜುಲೈ 4, ಶುಕ್ರವಾರ ಸಂಜೆ 4.00 ಗಂಟೆಗೆ ಸಂಸ್ಥೆಯ ಐ. ವೈ. ಸಿ ಸಭಾಂಗಣದಲ್ಲಿ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿತ ಈ ಪ್ರಶಸ್ತಿಯು ರೂ.60,000 ನಗದು ಪುರಸ್ಕಾರ ಒಳಗೊಂಡಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles