ಉಡುಪಿ : ಇತ್ತಿಚೆಗೆ ಉಡುಪಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟು, ಸದ್ಯ ನ್ಯಾಯಾಂಗ ಬಂಧನ ವಿಧಿಸಿದೆ. ಅಮಾಸೆಬೈಲು ಪೊಲೀಸ್ ರು ಆರು ದಿನಗಳ ಕಾಲ ಕಸ್ಟಡಿ ಪಡೆದು ವಿಚಾರಣೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಮೂರು ಪ್ರಕರಣದ ವಿಚಾರಣೆಗೆ ಕಸ್ಟಡಿಗೆ ಪಡೆದಿದ್ದ ತನಿಖಾಧಿಕಾರಿಗಳು ನೇತೃತ್ವದಲ್ಲಿ, ಅಮಾಸೆಬೈಲು ವ್ಯಾಪ್ರಿಯಲ್ಲಿ 2007 ರಲ್ಲಿ ನಡೆದಿದ್ದ ಕೂಂಬಿಂಗ್ ನಿರತ ಪೊಲೀಸರ ಮೇಲೆ ಗುಂಡಿನ ದಾಳಿ, ಮನೆಗೆ ನುಗ್ಗಿ ಕೊಲೆ ಬೆದರಿಕೆ ಪ್ರಕರಣ, ಸಾರ್ವಜನಿಕ ಜಾಗದಲ್ಲಿ ಕರಪತ್ರ ಮತ್ತು ಬ್ಯಾನರ್ ಅಂಟಿಸಿದ ಪ್ರಕರಣದ ವಿಚಾರಣೆ ನಡೆಸಿ ಮಹಜರು ನಡೆಸಲಾಗಿದೆ. ಕುಂದಾಪುರ ಡಿವೈಎಸ್ ಪಿ ಎಚ್. ಡಿ ಕುಲಕರ್ಣಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಕುಂದಾಪುರ 2 ನೇ ಹೆಚ್ಚುವರಿ ಸಿವಿಲ್- ಜೆಎಂಎಫ್ ಸಿ ನ್ಯಾಯಾಲಯ ಹಾಜರು ಪಡಿಸಿದ ಬಳಿಕ ನ್ಯಾಯಾಲಯವು ಮುಂದಿನ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.