ಕಾರ್ಕಳ : ಮನೆಯೊಂದರ ತೋಟದ ಶೆಡ್ ನಲ್ಲಿಟ್ಟಿದ್ದ ಅಡಿಕೆ ಕಳವು ಮಾಡಿದ 12 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಬಂಧಿತ ಆರೋಪಿಗಳು ಕಾನೂನು ಸಂಘರ್ಷಕ್ಕೆ ಒಳಪಟ್ಟಿರುವುದರಿಂದ ಅವರ ಹೆಸರನ್ನು ಬಹಿರಂಗಪಡಿಸಲಾಗಿಲ್ಲ.

2025 ಆಗಸ್ಟ್ 23 ರಂದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮುಂಡ್ಕೂರು ಮುಲ್ಲಡ್ಕದ ಮನೆಯೊಂದರ ತೋಟದ ಶೆಡ್ನಲ್ಲಿಟ್ಟಿದ್ದ ಅಡಿಕೆ ಕಳವು ಪ್ರಕರಣದ ತನಿಖೆ ನಡೆಸಿದಾಗ, ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಆರೋಪಿಗಳಿಂದ 5ಲಕ್ಷ ರೂ. ಮೌಲ್ಯದ 1100 ಕೆ.ಜಿ. ಅಡಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.


