Thursday, June 26, 2025

spot_img

ದಲಿತ ನಾಯಕನನ್ನು ಕಾಂಗ್ರೆಸ್ ಸೈಡ್‌ ಲೈನ್‌ ಮಾಡುತ್ತಿದೆ: ಸುನೀಲ್‌ ಕುಮಾರ್

ಉಡುಪಿ: ಗುಜರಾತಿನ ಅಹ್ಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಪ್ರಾರ್ಥನಾ ಸಭೆಯ ಸೋಫಾದಲ್ಲಿ ಎಐಸಿಸಿ ಅಧ್ಯಕ್ಷರಿಗೆ ಸ್ಥಾನ ಇಲ್ಲ. ಕಾಂಗ್ರೆಸ್‌ ನ ಅತ್ಯುನ್ನತ ನಾಯಕನನ್ನು ದಲಿತ ಎಂಬ ಕಾರಣಕ್ಕೆ ಪ್ರತ್ಯೇಕವಾಗಿ ಬದಿಯಲ್ಲಿ ಕುರ್ಚಿಯಲ್ಲಿ ಕೂರಿಸಲಾಗಿದೆ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ವ್ಯಂಗ್ಯವಾಡಿದರು. ಅವರು ಗುರುವಾರ ಉಡುಪಿಯಲ್ಲಿ ಪತ್ರಕರ್ತರ ಜೊತೆ ಮಾತನಾಡಿ, ಕಾಂಗ್ರೆಸ್ ಸಮಾವೇಶದಲ್ಲಿ ಸೆಂಟರ್ ಪ್ರೇಮ್‌ನಲ್ಲಿ ಸೋನಿಯಾ, ರಾಹುಲ್ ಇದ್ದು, ಖರ್ಗೆಯವರನ್ನು ಸೈಡ್ ಲೈನ್ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷರ ಜೊತೆ ಕಾಂಗ್ರೆಸ್ ಹೇಗೆ ನಡೆದುಕೊಂಡಿದೆ ಗಮನಿಸಿ. ಗ್ರಾ.ಪಂ ಅಧ್ಯಕ್ಷರಾಗಿದ್ದರು ಆತ ಸಭಾಂಗಣದ ಮಿಡಲ್ ಫ್ರೇಮ್‌ನಲ್ಲಿ ಇರಬೇಕು, ಆದರೆ ದಲಿತ ನಾಯಕನನ್ನು ಕಾಂಗ್ರೆಸ್ ಯಾವ ರೀತಿ ನಡೆಸಿಕೊಂಡಿದೆ ನೋಡಿ ಎಂದರು. ರಾಷ್ಟ್ರೀಯ ಅಧ್ಯಕ್ಷ ಆಗಿದ್ದರೂ ದಲಿತ ಎಂಬ ಕಾರಣಕ್ಕೆ ಈ ರೀತಿ ನಡೆಸಿಕೊಳ್ಳಲಾಗಿದೆ. ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಬೆಂಕಿ ಹಾಕಿದಾಗಲೂ ಇದೇ ವರ್ತನೆಯನ್ನು ಕಾಂಗ್ರೆಸ್ ತೋರಿತ್ತು. ರಾಷ್ಟ್ರೀಯ ಅಧ್ಯಕ್ಷರಿಂದ ಕಾಲೋನಿಯ ದಲಿತ ಬಂಧುವಿನವರೆಗೆ ಕಾಂಗ್ರೆಸ್ ಇದೆ ಧೋರಣೆಯನ್ನು ತಾಳುತ್ತದೆ. ದಲಿತರ ತುಷ್ಟೀಕರಣ ಮಾಡಿದೆ ಹೊರತು, ದಲಿತರ ಉದ್ದಾರ ಕಾಂಗ್ರೆಸ್ ಮಾಡಿಲ್ಲ. ಅಂಬೇಡ್ಕರ್‌ಗೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೊಟ್ಟಿಲ್ಲ, ಖರ್ಗೆ ಸ್ವಾಭಿಮಾನ ಇದ್ದಿದ್ರೆ ಅಧಿವೇಶನದ ಎದ್ದು ಬರಬೇಕಾಗಿತ್ತು. ಸೋಫಾದಲ್ಲಿ ಕೂರಲು ಬಿಟ್ಟಿಲ್ಲ, ಮರದ ಕುರ್ಚಿಯಲ್ಲಿ ಸೈಡಲ್ಲಿ ಕೂರಿಸಿದ್ದಾರೆ ಎಂದರು. 

ಆಡಳಿತ ರಂಗದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದ್ದು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೇ ಈ ಸರಕಾರವು ಭ್ರಷ್ಟಾಚಾರದಲ್ಲಿ ನಂಬರ್ ಒನ್ ಎಂದಿದ್ದಾರೆ. ಸಿದ್ದರಾಮಯ್ಯನವರಿಗೆ ಮಾನ ಮರ್ಯಾದೆ ಇದ್ದರೇ, ಎಐಸಿಸಿ ಅಧಿವೇಶನದಲ್ಲಿ ರಾಜೀನಾಮೆ ಕೊಡಬೇಕಿತ್ತು. ಆರ್ಥಿಕ ವರ್ಷದ ಬಜೆಟ್ ರೆಡಿ ಮಾಡಿದವರು ಭ್ರಷ್ಟಾಚಾರದಲ್ಲಿ ನಂಬರ್ ಒನ್ ಎಂದು ಹೊಗಳಿಕೆ ಮಾತಾಡಿದ್ದಾರೆ ಎಂದು ಟೀಕಿಸಿದರು. ಸಚಿವ ಸುಧಾಕರ್ ಎರಡು ವರ್ಷದ ನಂತರ ಸರ್ಕಾರ ಈಗ ಟೇಕಾಫ್ ಆಗಿದೆ ಎಂದಿದ್ದಾರೆ. ದಲಿತರ ಹಣವನ್ನು ಮಿಸ್ ಯೂಸ್ ಮಾಡಿದ ಸರ್ಕಾರ ಇದು.  ಮುಸ್ಲಿಮರನ್ನು ಮಾತ್ರ ಓಲೈಕೆ ಮಾಡುವ ಸರ್ಕಾರ ಇದಾಗಿದ್ದು, ಬೆಲೆ ಏರಿಕೆ ಮಾಡೋದ್ರಲ್ಲಿ ಗರಿಷ್ಠ ಪ್ರಮಾಣವನ್ನು ಕಾಂಗ್ರೆಸ್ ಸರ್ಕಾರ ಮೀರಿದೆ. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಬೆಲೆಯನ್ನು ಜಾಸ್ತಿ ಮಾಡಿದೆ ಎಂದರು. ರಾಜ್ಯದ ಜಾತಿಗಣತಿ ವರದಿ ಕ್ಯಾಬಿನೆಟ್‌ನಲ್ಲಿ ತರುವ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ನಾನು ಮಾಧ್ಯಮಗಳಲ್ಲಿ ಗಮನಿಸಿದ್ದು, ಕಾಂತರಾಜ್ ವರದಿ ಜಾರಿಗೆ ತರ್ತಿರೋ‌‌‌..? ಜಯಪ್ರಕಾಶ್ ಹೆಗ್ಡೆ ವರದಿ ಜಾರಿಗೆ ತರ್ತೀರೋ.‌‌‌‌‌..? ಎರಡು ವರದಿಗಳ ಬಗ್ಗೆ ಕಾಂಗ್ರೆಸ್ ಸರ್ಕಾರ ಸ್ಪಷ್ಟನೆ ಕೊಡಬೇಕು‌‌. ಸಿದ್ದರಾಮಯ್ಯನ ವಿಭಿನ್ನ ಧೋರಣೆಗಳನ್ನು ಜನ ದೀರ್ಘಕಾಲ ನಂಬಲ್ಲ ಎಂದರು. 

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles