Saturday, June 28, 2025

spot_img

ನಾಪತ್ತೆಯಾದ ದಿಗಂತ್‌ ಕೊನೆಗೂ ಪತ್ತೆ… !

ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ ಅಪ್ರಾಪ್ತ ಬಾಲಕ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ‌ ದಿಗಂತ್‌, ಇದೇ ಫೆಬ್ರವರಿ 25 ರಂದು ಮಂಗಳವಾರ ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದನು. ಸಂಜೆ ಫರಂಗಿಪೇಟೆ ರೈಲ್ವೆ ಹಳ್ಳಿಯಲ್ಲಿ ರಕ್ತದ ಕಲೆಯ ಚಪ್ಪಲಿ ಹಾಗೂ ಮೊಬೈಲ್ ಫೋನ್ ಸ್ಥಳದಲ್ಲಿ ಪತ್ತೆಯಾಗಿದ್ದು ನಿಗೂಢ ರೀತಿಯಲ್ಲಿ ದಿಗಂತ್ ನಾಪತ್ತೆಯಾಗಿದ್ದ. ಬಳಿಕ ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ನಾಪತ್ತೆ ಪ್ರಕರಣ ದಾಖಲಾಗಿತ್ತು. ಕಳೆದ 12 ದಿನಗಳಿಂದ ಬಂಟ್ವಾಳ ಪೊಲೀಸರು ದಿಗಂತ್ ಪತ್ತೆಗಾಗಿ ಪೊಲೀಸರ ತಂಡ ರಚಿಸಿ ವಿವಿಧ ರೀತಿಯಲ್ಲಿ ಕಾರ್ಯಾಚರಣೆ ನಡೆಸಿದ್ದರು‌‌‌‌.
ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ, 40ಕ್ಕೂ ಅಧಿಕ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು. ಡಿ‌ಎಆರ್ ತಂಡದ 30 ಪೊಲೀಸರು, ರೈಲ್ವೆ ಪೊಲೀಸ್, ಅಗ್ನಿಶಾಮಕ ದಳ, ಎಫ್.ಎಸ್.ಎಲ್, ಡಾಗ್ ಸ್ಕ್ವಾಡ್, ಡ್ರೋನ್ ಕ್ಯಾಮರಾಗಳನ್ನು ಬಳಿಸಿ ಹುಡುಕಾಟ ನಡೆಸಿದ್ದರು. ಈ ಪ್ರಕರಣದ ಕುರಿತು ಸದನದಲ್ಲೂ ಕೂಡ ಸದ್ದಾಗಿದ್ದು, ಬಾಲಕ ಎಲ್ಲಿ ಹೋದ ಎನ್ನುವ ಪ್ರಶ್ನೆ ಎಲ್ಲರನ್ನ ಕಾಡುತ್ತಿತ್ತು.
ಇಂದು ಉಡುಪಿಯ ಡಿ ಮಾರ್ಟ್ ಸಮೀಪ ಕಳೆದ ಕೆಲವು ದಿನಗಳಿಂದ ಹುಡುಕಾಡುತ್ತಿದ್ದ ದಿಗಂತ್ ಪತ್ತೆಯಾಗಿದ್ದಾನೆ. ಡಿ ಮಾರ್ಟ್ ಒಳಗೆ ಬಟ್ಟೆಗಳನ್ನ ಬ್ಯಾಕ್ ಗೆ ತುಂಬಿಸಿಕೊಳ್ಳುತ್ತಿದ್ದಾಗ ದಿಗಂತ್, ಅನುಮಾನ ಚಲನವಲನ ಕಂಡು ಸಂಶಯಗೊಂಡ ಡಿ ಮಾರ್ಟ್ ಸಿಬ್ಬಂದಿಗಳು ವಿಚಾರಣೆ ನಡೆಸಿದಾಗ ತಾನು ದಿಗಂತ್ ಎಂದು ಹೇಳಿಕೊಂಡಿದ್ದಾನೆ. ಸದ್ಯ ಈ ಕುರಿತು ಮಂಗಳೂರು ಪೊಲೀಸರು ದಿಗಂತ್ ಪೋಷಕರಿಗೆ ಮಾಹಿತಿ ನೀಡಿದ್ದು ಉಡುಪಿಯಿಂದ ದಿಗಂತ್ ನನ್ನ ಮಂಗಳೂರಿಗೆ ಕರೆದುಕೊಂಡು ಪೋಷಕರ ಬಳಿಗೆ ಪೊಲೀಸರು ತೆರಳಿದ್ದಾರೆ ಎನ್ನಲಾಗಿದೆ

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles