Monday, August 25, 2025

spot_img

ನೈಸರ್ಗಿಕ ಕೃಷಿ ತರಬೇತಿ : ಸಮಾರೋಪ

ಉಡುಪಿ : ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಕೃಷಿ ವಿಜ್ಜಾನ ಕೇಂದ್ರ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಾದ ಕೃಷಿ ಸಖಿಯರಿಗೆ 6 ದಿನದ ನೈಸರ್ಗಿಕ ಕೃಷಿ ತರಬೇತಿಯ ಸಮಾರೋಪ ಸಮಾರಂಭವು ಇತ್ತೀಚೆಗೆ ಬ್ರಹ್ಮಾವರದ ಕೃಷಿ ವಿಜ್ಜಾನ ಕೇಂದ್ರದಲ್ಲಿ ನಡೆಯಿತು.

ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಅವಿನಾಶ್, ಕೃಷಿ ಸಖಿಯರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿ, ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಯನ್ನು ಅಭಿವೃದ್ಧಿ ಪಡಿಸಲು ಹಾಗೂ ಕೃಷಿ ಕ್ಷೇತ್ರಕ್ಕೆ ಸಂಬಂಧಪಟ್ಟ ಸೇವೆಗಳನ್ನು ನೀಡಲು ಕೃಷಿ ಸಖಿಯರನ್ನು ಪ್ರತಿ ಗ್ರಾಮ ಪಂಚಾಯತ್ ನಲ್ಲಿ ನಿಯೋಜನೆ ಮಾಡಲಾಗಿದೆ ಎಂದರು. ಕೃಷಿ ವಿಜ್ಞಾನ ಕೇಂದ್ರದ ಅನುಭವಿ ಹಾಗೂ ಹಿರಿಯ ಕೃಷಿ ವಿಜ್ಞಾನಿಗಳಿಂದ ನೈಸರ್ಗಿಕ ಕೃಷಿ ಬಗ್ಗೆ ತರಬೇತಿ ನೀಡಲಾಗಿದ್ದು, ತರಬೇತಿ ಪಡೆದ ಕೃಷಿ ಸಖಿಯರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಸಮುದಾಯದ ಸಂಪನ್ಮೂಲ ವ್ಯಕ್ತಿಗಳಂತೆ ಕರ್ತವ್ಯ ನಿರ್ವಹಿಸಬೇಕು. ಕೃಷಿಗೆ ಸಂಬಂಧಪಟ್ಟ ಯೋಜನೆ, ಕಾರ್ಯಕ್ರಮ, ತರಬೇತಿ, ಸೌಲಭ್ಯಗಳನ್ನು ಆದ್ಯತೆಯಲ್ಲಿ ರೈತರಿಗೆ ತಲುಪಿಸಲು ಆಸಕ್ತಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ನವೀನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಬ್ರಹ್ಮಾವರ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಸುಧೀರ್ ಕಾಮತ್ ಕೆ.ವಿ, ಗೃಹ ವಿಜ್ಞಾನ ಪದವೀಧರೆ ವೀಣಾ ಶ್ಯಾನುಭಾಗ್, ವಿಜ್ಞಾನಿ ಡಾ. ಸದಾನಂದ್ ಆಚಾರ್ಯ, ಸಂಜೀವಿನಿ ಯೋಜನೆಯ ಯುವ ವೃತ್ತಿಪರರಾದ ರಂಜಿತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles