Friday, June 27, 2025

spot_img

ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯವಾಗಲಿ : ಅಶೋಕ್ ಕೊಡವೂರು

ಉಡುಪಿ: ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೂ ತಲುಪಿಸುವ ಕಾರ್ಯವಾಗಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕೊಡವೂರು ತಿಳಿಸಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸರಕಾರ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕೆಂಬ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಇವು ಸಮಾಜದ ಕಟ್ಟಕಡೆಯ ವ್ಯಕ್ತಿಗಳಿಗೂ ತಲುಪಿಸುವ ಕಾರ್ಯವನ್ನು ಮಾಡಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾ.ರಿ ಪ್ರತೀಕ್ ಬಾಯಲ್ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಐದು ಗ್ಯಾರಂಟಿ ಯೊಜನೆಗಳಿಗೆ ಶೇ. 95 ಕ್ಕಿಂತಲೂ ಹೆಚ್ಚು ಜನರು ಫಲಾನುಭವಿಗಳಾಗಿದ್ದಾರೆ. ಬಾಕಿ ಉಳಿದ ಅರ್ಹ ಪ್ರತಿಯೊಬ್ಬ ಫಲಾನುಭವಿಗಳಿಗೂ ಈ ಯೋಜನೆಯ ಲಾಭ ತಲುಪಬೇಕು ಎಂದರು. ಪಂಚ ಗ್ಯಾರಂಟಿ ಯೋಜನೆಗಳ ಲಾಭ ಪಡೆದ ಫಲಾನುಭವಿಗಳ ಅನುಭವಗಳ ಹಾಗೂ ಅನಿಸಿಕೆ ಗಳ ಯಶೋಗಾಥೆಗಳನ್ನು ಕ್ರೂಢೀಕರಿಸಿ, ಪ್ರಚಾರ ಕೈಗೊಳ್ಳಬೇಕು ಎಂದ ಅವರು, ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಗಳನ್ನು ನೀಡುವುದರೊಂದಿಗೆ ಅವರು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ಮಾಡಿಕೊಡಬೇಕು ಎಂದರು. ಉಡುಪಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷರ ರಮೇಶ್ ಕಾಂಚನ್, ಬ್ರಹ್ಮಾವರ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷೆ ಡಾ. ಸುನೀತಾ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ವೀಣಾ ವಾಗ್ಳೆ, ಅಧ್ಯಕ್ಷರುಗಳಾದ ಮೋಹನ್ ಪೂಜಾರಿ ಉಪ್ಪುಂದ, ಶಂಕರ್ ಶೇರಿಗಾರ್, ಹರಿಪ್ರಸಾದ್ ಶೆಟ್ಟಿ ಹಾಗೂ ನವೀನ್‌ಚಂದ್ರ ಎಸ್ ಸುವರ್ಣ, ಸಮಿತಿಯ ಸದಸ್ಯರುಗಳಾದ ಮಂಜುನಾಥ್ ಕುಲಾಲ್, ಸಯ್ಯದ್ ಕುರ್ಖಾನ್ ಯಾಸೀನ್, ರೋಷನ್ ಶೆಟ್ಟಿ, ಚಂದ್ರಶೇಖರ್ ಬಾಯರಿ, ಅಜಿತ್ ಹೆಗಡೆ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.


ಶಕ್ತಿ ಯೋಜನೆಯಡಿ ಉಚಿತವಾಗಿ ಮಹಿಳೆಯರಿಗೆ ಪ್ರಯಾಣಿಸಲು ಅವಕಾಶ ಮಾಡಿಕೊಟ್ಟಿದ್ದು, 2023 ರ ಜೂನ್‌ನಿಂದ ಈವರೆಗೆ ಜಿಲ್ಲೆಯಲ್ಲಿ 2.57 ಕೋಟಿ ಗೂ ಹೆಚ್ಚು ಮಹಿಳೆಯರು ಸಂಚರಿಸಿದ್ದು, 90.10 ಕೋಟಿ ರೂ. ಭರಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ 2023 ರ ಆಗಸ್ಟ್ ನಿಂದ ಈವರೆಗೆ 2.25 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಪ್ರತೀ ತಿಂಗಳು 2000 ರೂ, ನಂತೆ ಈವರೆಗೆ 870.83 ಕೋಟಿ ರೂ. ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 2023 ರ ಆಗಸ್ಟ್ ನಿಂದ ಈವರೆಗೆ 2.81 ಲಕ್ಷ ಗೃಹಬಳಕೆ ಗ್ರಾಹಕರಿಗೆ 438.14 ಕೋಟಿ ರೂ. ಉಚಿತ ವಿದ್ಯುತ್ ನೀಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ 2023 ರ ಜುಲೈ ನಿಂದ ಜನವರಿ 2025 ರ ವರೆಗೆ ಡಿಬಿಟಿ ಮೂಲಕ 1,98,825 ಫಲಾನುಭವಿಗಳಿಗೆ 225.65 ಲಕ್ಷ ರೂ. ಗಳನ್ನು ಭರಿಸಲಾಗಿದೆ, ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 3762 ಅಭ್ಯರ್ಥಿಗಳು ನೋಂದಣಿಯಾಗಿದ್ದು, ಡಿಬಿಟಿ ಮೂಲಕ ಪ್ರತೀ ತಿಂಗಳು 5 ಕೋಟಿ 82 ಲಕ್ಷ ರೂ. ಗೂ ಹೆಚ್ಚು ಹಣ ಫಲಾನುಭವಿಗಳಿಗೆ ವರ್ಗಾವಣೆ ಮಾಡಲಾಗಿದೆ
.

ಅಶೋಕ್ ಕೊಡವೂರು ( ಅಧ್ಯಕ್ಷ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ)

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles