ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಠ ಜಾತಿ/ ವರ್ಗದ ಮಾನ್ಯತೆ ಪಡೆದ ಪತ್ರಕರ್ತರಿಗೆ ಕಾವೇರಿ ನಿವಾಸದಲ್ಲಿ ಲ್ಯಾಪ್ ಟಾಪ್ ಮತ್ತು ಮೀಡಿಯಾ ಕಿಟ್ ವಿತರಿಸಿದರು.

ಸಚಿವ ಈಶ್ವರ್ ಖಂಡ್ರೆ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶಾಸಕ ನರೇಂದ್ರಸ್ವಾಮಿ, ಸರ್ಕಾರದ ಕಾರ್ಯದರ್ಶಿ ಕಾವೇರಿ, ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇಂದು ಸಾಂಕೇತಿಕವಾಗಿ ಆರು ಮಂದಿ ಪತ್ರಕರ್ತರಿಗೆ ಕಿಟ್ ವಿತರಿಸಲಾಯಿತು.
