Friday, June 27, 2025

spot_img

ಪಾಜಕ ಕ್ಷೇತ್ರ ಮಠದಲ್ಲಿ ಕಾವಿ ಚಿತ್ರಕಲೆ ಉದ್ಘಾಟನೆ..

ಉಡುಪಿ: ಶ್ರೀ ಮಧ್ವಾಚಾರ್ಯರ ಜನ್ಮಸ್ಥಳ ಪಾಜಕ ಕ್ಷೇತ್ರ ಮಠದಲ್ಲಿ ಇತ್ತೀಚೆಗೆ ರಚಿಸಿರುವ ಕಾವಿ ಚಿತ್ರಕಲೆಯನ್ನು ಕಾಣೆಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮಧ್ವನವಮಿಯ ಪ್ರಥಮ ದಿನದಂದು ಉದ್ಘಾಟಿಸಿದರು. ಇಲ್ಲಿ ಮಧ್ವಾಚಾರ್ಯರ ಜೀವನ ಚರಿತ್ರೆಗೆ ಸಂಬಂಧಪಟ್ಟಪ್ರಮುಖ ಎಂಟು ಕಾವಿ ಚಿತ್ರಗಳನ್ನು ರಚಿಸಲಾಗಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಚಿತ್ರಕಲಾವಿದ ಡಾ. ಉಪಾಧ್ಯಾಯ ಮೂಡುಬೆಳ್ಳೆಯವರು ಈ ಚಿತ್ರಗಳನ್ನು ರಚಿಸಿದ್ದಾರೆ. ಉದ್ಘಾಟನೆಯ ಸಂದರ್ಭದಲ್ಲಿ ಶ್ರೀ ಮಠದ ಅರ್ಚಕರಾದ ವೇದಮೂರ್ತಿ ಮಾಧವ ಉಪಾಧ್ಯಾಯ, ವಾದಿರಾಜ ಉಪಾಧ್ಯಾಯ, ವೇದಮೂರ್ತಿ ನಂದಳಿಕೆ ವಿಠ್ಠಲ ಭಟ್, ಡಾ.ಉಪಾಧ್ಯಾಯ ಮೂಡುಬೆಳ್ಳೆ, ಕ್ಯಾಮಲಿನ್ ನ್ಯಾಷನಲ್ ಅವಾರ್ಡ್ ವಿಜೇತ ಡಾ. ಪ್ರಮೋದನ ಉಪಾಧ್ಯಾಯ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಚಿತ್ರಗಳು ದೊಡ್ಡ ಗಾತ್ರದಲ್ಲಿ ಅದ್ಭುತವಾಗಿ ಮೂಡಿಬಂದಿವೆ. ಈ ಬಾರಿಯ ಮಧ್ವನವಮಿಗೆ ಇದೊಂದು ವಿಶೇಷ ಕೊಡುಗೆಯಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles