Friday, June 27, 2025

spot_img

ಪುತ್ತೂರು: ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ಮುಂದೆ ಪ್ರತಿಭಟನೆ

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿದ್ದ ಹಲವು ಮನೆಗಳನ್ನು ಈಗಾಗಲೇ ತೆರವುಗೊಳಿಸಲಾಗಿದ್ದು, ಫೆ. 5 ರಂದು ಬೆಳಗಿನ ಜಾವ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ನೆಲಸಮಗೊಳಿಸಲಾಗಿದೆ. ಮನೆಯನ್ನು ದೇವಳದ ಹಿಂಬಂದಿಯಲ್ಲಿರುವ ಹಲವು ಮನೆಗಳವರು ಸ್ವಇಚ್ಛೆಯಿಂದ ಮನೆ ಬಿಟ್ಟು ಕೊಟ್ಟಿದ್ದಾರೆ. ಆದರೆ ರಾಜೇಶ್ ಬನ್ನೂರು ಜೊತೆ ಮಾತುಕತೆ ನಡೆಸುವುದೆಂದು ಫೆ.4ರಂದು ನಿಗದಿಯಾಗಿತ್ತು, ಆದರೆ ಮಾತುಕತೆ ನಡೆದಿರಲಿಲ್ಲ. ಆದ್ದರಿಂದ ರಾಜೇಶ್ ಬನ್ನೂರು ಅವರ ಮನೆಯ ಎದುರು ಪ್ರತಿಭಟನೆ ನಡೆದಿದೆ.

ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ಚನಿಲ ತಿಮ್ಮಪ್ಪ ಶೆಟ್ಟಿ, ಶಿವಕುಮಾ‌ರ್ ಸಹಿತ ಕೆಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಶಾಸಕ ಅಶೋಕ್‌ ಕುಮಾ‌ರ್ ರೈ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯ ವಿನಯ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles