Sunday, July 27, 2025

spot_img

ಪೋಕ್ಸೋ ಕಾಯ್ದೆ ಪ್ರಕರಣ: ಸ್ಥಳ ಮಹಜರು ವೇಳೆ ಹಲ್ಲೆ

ಉಡುಪಿ: ಪೋಕ್ಸೋ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಪೋಕ್ಸೊ ಪ್ರಕರಣದ ಆರೋಪಿಯನ್ನು ಲಾಠಿ ಏಟು ಕೊಟ್ಟು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಉತ್ತರ ಪ್ರದೇಶ ಮೂಲದ ಮಣಿಪಾಲ ವಿ.ಪಿ.ನಗರದ ನಿವಾಸಿ ಮುಹಮ್ಮದ್ ದಾನೀಶ್(29) ಪ್ರಕರಣದ ಆರೋಪಿ. ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಯಡಿ ದಾಖಲಾಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜು.12ರಂದು ಆರೋಪಿ ಮುಹಮ್ಮದ್ ದಾನೀಶ್ನನ್ನು ದಸ್ತಗಿರಿ ಮಾಡಿದ್ದು, ಈತನನ್ನು ತನಿಖೆಗೆ ಒಳಪಡಿಸಿ ಜು.13ರಂದು ತನಿಖೆಯ ಬಗ್ಗೆ ಮಣಿಪಾಲ ತಾಂಗೋಡು 2ನೇ ಕ್ರಾಸ್ ಹಾಡಿ ಬಳಿ ಕೃತ್ಯವೆಸಗಿದ ಸ್ಥಳವನ್ನು ಪಂಚನಾಮೆಯನ್ನು ಮಾಡುವ ಕರೆದುಕೊಂಡು ಹೋಗಲಾಗಿತ್ತು. ಈ ಸಮಯದಲ್ಲಿ ಆರೋಪಿ ಕೈಕೊಳ ಹಿಡಿದುಕೊಂಡಿದ್ದ ಸಿಬ್ಬಂದಿ ರಿತೇಶ್ರವರ ಎದೆಗೆ ಎರಡೂ ಕೈಗಳಿಂದ ಗುದ್ದಿ ದೂಡಿ ನೆಲಕ್ಕೆ ಬೀಳಿಸಿ ಅಲ್ಲಿಯೇ ಇದ್ದ ಕಲ್ಲನ್ನು ಎತ್ತಿಹಾಕಲು ಬಂದಿದ್ದನು.

ತಡೆಯಲು ಬಂದ ಪೊಲೀಸ್ ನಿರೀಕ್ಷಕರರಾದ ರಾಮಚಂದ್ರ ನಾಯಕ್ ಹಲ್ಲೆಗೆ ಯತ್ನಿಸಿದ ಹಿನ್ನಲೆಯಲ್ಲಿ ಲಾಠಿಯಿಂದ ಹೊಡೆದು ಬಂಧಿಸಲಾಗಿದೆ. ಘಟನೆಯಲ್ಲಿ ಉಡುಪಿ ಮಹಿಳಾ ಠಾಣೆಯ ಪೊಲೀಸ್ ಸಿಬ್ಬಂದಿ ರಿತೇಶ್ ಹಾಗೂ ಪೊಲೀಸರ ಲಾಠಿ ಏಟಿನಿಂದ ಗಾಯಗೊಂಡಿದ್ದಾರೆ. ಆರೋಪಿಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಒಳರೋಗಿಯಾಗಿ ದಾಖಲಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles