Wednesday, March 4, 2026

spot_img

ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಅನುಷ್ಠಾನಕ್ಕೆ ಸಂಸದ ಕೋಟ ಕರೆ

ಉಡುಪಿ : ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಅನುಷ್ಠಾನ ಮಾಡುವುದರ ಮೂಲಕ ರಾಷ್ಟ್ರೀಕೃತ ಬ್ಯಾಂಕಿನಿಂದ ಸಾಲ ಸೌಲಭ್ಯ ಪಡೆದು ಕೇಂದ್ರ ಸರ್ಕಾರದಿಂದ 78,000 ಸಬ್ಸಿಡಿ ಪಡೆಯುವ ಅವಕಾಶವನ್ನು ಜಿಲ್ಲೆಯ ಗೃಹ ಬಳಕೆಯ ಬಳಕೆದಾರರು ಅಳವಡಿಸಿಕೊಳ್ಳಬೇಕೆಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂರ್ಯ ಘರ್ ಪ್ರಗತಿ ಪರಿಶೀಲನೆ ಸಭೆಯಲ್ಲಿ ಹೇಳಿದರು.


ಉಡುಪಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ, ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕರೆದ ಸಭೆಯಲ್ಲಿ ನಿಟ್ಟೆ, ಮಿಜಾರು, ಕೋಟತಟ್ಟು, ಉಪ್ಪೂರು, ಕಿರಿಮಂಜೇಶ್ವರ ಸೇರಿದಂತೆ ಅಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಉದ್ದೇಶಿಸಿ ಕೋಟ ಮಾತನಾಡುತ್ತಿದ್ದರು. ವಿದ್ಯುತ್ ಬಳಕೆಯ ಪ್ರತಿ ಕುಟುಂಬಗಳು ಸ್ವಾವಲಂಬನೆ ಸಾಧಿಸಲು ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ನೆರವಾಗುತ್ತದೆ. ರಾಷ್ಟ್ರೀಕೃತ ಬ್ಯಾಂಕುಗಳು 2.50 ಲಕ್ಷ ರೂ. ಸಾಲ ಸೌಲಭ್ಯ ನೀಡುತ್ತಿದ್ದು, 78,000 ರೂ. ಸಬ್ಸಿಡಿ ಸಹ ನೀಡಲಾಗುತ್ತಿದೆ. ಆಸಕ್ತ ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಹಾಗೂ ನೊಂದಾಯಿಸಿಕೊಂಡು ವೆಂಡರ್‌ಗಳ ಮೂಲಕ ವಿದ್ಯುತ್ ಸಂಪರ್ಕ ಪಡೆಯಬಹುದಾಗಿದೆ ಎಂದು ವಿವರಿಸಿದರು. ಜಿಲ್ಲೆಯಲ್ಲಿ ಕುಂದಾಪುರ ಪುರಸಭಾ ಸದಸ್ಯರಾದ ಶೇಖರ ಪೂಜಾರಿ, ಕಾಪು ಪುರಸಭಾ ಸದಸ್ಯರಾದ ಅನಿಲ್, ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯರಾದ ನಿತಿನ್ ರವರು ಕೇಂದ್ರ ಸರ್ಕಾರದ ಸೂರ್ಯ ಘರ್ ಯೋಜನೆಯ ಅನುಷ್ಠಾನ ಸಮಿತಿಯ ಸದಸ್ಯರಾಗಿ ಜಿಲ್ಲೆಗೆ ನಾಮ ನಿರ್ದೇಶಿತರಾಗಿದ್ದು, ಸೂರ್ಯ ಘರ್ ಯೋಜನೆಯ ಅನುಷ್ಠಾನಕ್ಕೆ ಜನರೊಂದಿಗೆ ಸಂಪರ್ಕಹೊಂದಿ ದುಡಿಯುತ್ತಿದ್ದಾರೆ ಎಂದು ಹೇಳಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾದ ಪ್ರತೀಕ್ ಬಾಯಲ್, ಯೋಜನಾ ನಿರ್ದೇಶಕರಾದ ಉದಯ್ ಕುಮಾರ್ ಶೆಟ್ಟಿ, ಮೆಸ್ಕಾಂ ಸೂಪರಿಟೆಂಡೆಂಟ್ ದಿನೇಶ್ ಉಪಾಧ್ಯಯ ಉಪಸ್ಥಿತರಿದ್ದರು.

ಜಿಲ್ಲೆಯ 161 ಗ್ರಾಮ ಪಂಚಾಯತ್ ಮತ್ತು ನಗರಾಡಳಿತ ಸಂಸ್ಥೆಗಳಲ್ಲೂ ಈ ಯೋಜನೆ ಅನುಷ್ಠಾನಗೊಳ್ಳುತ್ತಿದೆ. ಪಂಚಾಯತ್ ವ್ಯಾಪ್ತಿಯಲ್ಲಿ ಯಾರೇ ಸೂರ್ಯ ಘರ್ ಯೋಜನೆ ಅಳವಡಿಸಿಕೊಂಡರೆ ಸ್ಥಳೀಯ ಪಂಚಾಯತ್‌ಗೆ 1,000 ರೂ. ಪ್ರೋತ್ಸಾಹ ಧನ ಸಿಗಲಿದೆ, ಪ್ರತಿ ಗ್ರಾಮ ಪಂಚಾಯತ್‌ಗಳು ಯೋಜನೆಯ ಅನುಷ್ಠಾನಕ್ಕೆ ಶ್ರಮವಹಿಸಬೇಕು.
ಕೋಟ ಶ್ರೀನಿವಾಸ ಪೂಜಾರಿ (ಸಂಸದರು)

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles