ಪ್ರಯಾಗ್ ರಾಜ್: ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮೇಳವಾಗಿರುವ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರು ಪುಣ್ಯಸ್ನಾನ ಮಾಡಿದ್ದಾರೆ.

ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ಪವಿತ್ರ ಗಂಗಾ ಜಲಕ್ಕೆ ಅರ್ಥ್ಯ ಬಿಟ್ಟು ಸುತ್ತು ಬಂದು, ನೀರಿನ ಮಧ್ಯೆ ನಿಂತು ರುದ್ರಾಕ್ಷಿ ಮಾಲೆ ಹಿಡಿದುಕೊಂಡು ಧ್ಯಾನ ಮಾಡಿದರು.

