Friday, June 27, 2025

spot_img

ಫೆಬ್ರವರಿ 13ರಂದು ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವ

ಕುಂದಾಪುರ : ಛತ್ರಪತಿ ಶ್ರೀ ಶಿವಾಜಿ ಅಭಿಮಾನಿ ಬಳಗ,2025 ಫೆಬ್ರವರಿ 13ರಂದು ಬಸ್ರೂರು ಸ್ವಾತಂತ್ರ್ಯ ದಿನ ಮಹೋತ್ಸವದ ಅಂಗವಾಗಿ ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ಸಂಜೆ ಪಾರಂಪಳ್ಳಿ ವಿಷ್ಣುಮೂರ್ತಿ ದೇವಸ್ಥಾನದ ಸಭಾಭವನದಲ್ಲಿ ಹಸ್ತಾಂತರಿಸಲಾಯಿತು. ಕಾರ್ಯಕ್ರಮಲ್ಲಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು ಹಾಗೂ ಬೃಹತ್ ಬೈಕ್ ರ್ಯಾಲಿ ಬಗ್ಗೆ ಮತ್ತು ಸಮಾರೋಪ ಕಾರ್ಯಕ್ರಮ ಕುರಿತು ಬಿಜೆಪಿ ಕುಂದಾಪುರ ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ ಮಾತನಾಡಿದರು.

ಕಾರ್ಯಕ್ರಮದ ಪೂರ್ವಭಾವಿ ಸಭೆಯ ಬಗ್ಗೆ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಪ್ರಸ್ತಾವಿಕ ಮಾತನಾಡಿ ಈ ಕಾರ್ಯಕ್ರಮದ ವಿಶೇಷತೆ ಕಾರ್ಯಕ್ರಮದ ರೂಪರೇಷೆಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ ಸಾಲಿಗ್ರಾಮದ ರಥ ಬೀದಿಯಿಂದ ಬೃಹತ್ ಬೈಕ್ ಜಾಥಾ ಫೆಬ್ರವರಿ 13 ಮಧ್ಯಾಹ್ನ 3 ಗಂಟೆಗೆ ಹೊರಡಲಿದ್ದು ಈ ಬೈಕ್ ಜಾಥಾಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದರು.

ಈ ಸಂದರ್ಭದ ವೇದಿಕೆಯಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಯೇಂದ್ರ ಪೂಜಾರಿ,,ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಅಧ್ಯಕ್ಷೆ ಸುಕನ್ಯಾ ಶೆಟ್ಟಿ, ಉಪಾಧ್ಯಕ್ಷೆ ಗಿರಿಜಾ ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು ಪ್ರಸ್ತುತ ಸದಸ್ಯರಾದ ರಾಜು ಪೂಜಾರಿ ಸಾಲಿಗ್ರಾಮ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಾಲಿಗ್ರಾಮ ಪಟ್ಟಣ ಪಂಚಾಯಿತಿನ ಮಾಜಿ ಅಧ್ಯಕ್ಷೆ ಪ್ರಸ್ತುತ ಸದಸ್ಯ ಸುಲತಾ ಹೆಗ್ಡೆ, ಪಟ್ಟಣ ಪಂಚಾಯಿತಿನ ಸದಸ್ಯರಾದ ಸಂಜೀವ ದೇವಾಡಿಗ, ಅನುಸೂಯ ಹೇರಳೆ, ಶಾಮ್ ಸುಂದರ್ ನಾಯರಿ, ಉಡುಪಿ ಜಿಲ್ಲಾ ಎಸ್. ಸಿ ಉಪಾಧ್ಯಕ್ಷ ಮಾಧವ ಕಾರ್ಕಡ, ಬಿಜೆಪಿ ಪ್ರಮುಖರಾದ ವಸಂತ ಕಾಂಚನ್, ಅಶೋಕ್ ಪೂಜಾರಿ ಸಾಲಿಗ್ರಾಮ, ಕರುಣಾಕರ ಪಾರಂಪಳ್ಳಿ, ಸಂಘಟನೆಯ ಪ್ರಮುಖ ಸುರೇಶ್ ಗಾಣಿಗ ಮತ್ತು ಪಕ್ಷದ ಕಾರ್ಯಕರ್ತರು ಹಿಂದೂ ಸಂಘಟನೆಯ ಪ್ರಮುಖರು ಮುಖಂಡರು ಉಪಸ್ಥಿತರಿದ್ದರು. ಸುರೇಂದ್ರ ಕಾಂಚನ್ ಸಂಗಮ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles