Saturday, March 29, 2025

spot_img

ಫೈರ್‌ ಬ್ರಾಂಡ್‌ ಯತ್ನಾಳ್‌ ಬಿಜೆಪಿಯಿಂದ ಉಚ್ಛಾಟನೆ…!

ಬೆಂಗಳೂರು : ರಾಜ್ಯ ಬಿಜೆಪಿಯ ರೆಬೆಲ್ ಲೀಡರ್ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಚಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಮಾಡಿದೆ. ಪದೇ ಪದೇ ಶಿಸ್ತು ಉಲ್ಲಂಘಿಸಿದ ಆರೋಪದಲ್ಲಿ ವಿಜಯಪುರದ ಶಾಸಕ ಯತ್ನಾಳ್‌ ಅವರಿಗೆ ಇತ್ತೀಚೆಗೆ ಶೋಕಾಸ್‌ ನೋಟಿಸ್‌ ನೀಡಲಾಗಿತ್ತು.

ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸಿ,ಶೋಕಾಸ್‌ ನೋಟಿಸ್‌ ಗೆ ಉತ್ತರಿಸಿದ್ದ ಯತ್ನಾಳ್‌, ಶಿಸ್ತು ಉಲ್ಲಂಘಿಸುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ ಅವರು ಪದೇ ಪದೇ ಶಿಸ್ತು ಉಲ್ಲಂಘಿಸಿದ್ದಾರೆ. ಕಾರಣ ಕೇಳಿ ನೀಡಿದ ನೋಟೀಸಿಗೂ ಕ್ಯಾರೆ ಎನ್ನದೇ ಪಕ್ಷದ ನಾಯಕರ ವಿರುದ್ಧವೇ ಹರಿಹಾಯುತ್ತಿದ್ದ ವಿಜಯಪುರ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles