ಉಡುಪಿ: ಮಾಸ್ಕ್ ಮ್ಯಾನ್ ಬಂಧನವಾಗಿರುವುದು ನಿಜ, ಆತ ಸದ್ಯ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ತನಿಖೆ ನಡೆಯುತ್ತಿರುವುದರಿಂದ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಅವರು ಉಡುಪಿಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮದವರೊಂದಿಗೆ ಮಾತಾನಾಡುತ್ತಾ, ಪ್ರಕರಣದ ತನಿಖೆಯನ್ನು ಅಧಿಕಾರಿಗಳು ಮುಂದುವರಿಸುತ್ತಾರೆ. ಹೆಚ್ಚಿನ ಮಾಹಿತಿ ಎಸ್ಐಟಿ ಅದರಿಂದ ಪಡೆಯುತ್ತೇನೆ, ತನಿಖೆ ಪೂರ್ಣಗೊಳ್ಳುವವರೆಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದರು.

ಇದರ ಹಿಂದೆ ಯಾವ ಜಾಲ ಇದೆ ಅನ್ನುವುದನ್ನು ಪತ್ತೆ ಮಾಡಲಾಗುವುದು, ಎಸ್ ಐ ಟಿ ತನಿಖೆಯ ಮುಕ್ತಾಯ ಆಗುತ್ತಾ ಎಂದು ಹೇಳಲು ಬರುವುದಿಲ್ಲ. ಸುಜಾತ ಭಟ್ ವಿಚಾರ ಕೂಡ ತನಿಖೆಯಲ್ಲಿದೆ, ತನಿಖೆಯ ವರದಿಗಳು ಬರುವವರೆಗೆ ಬಹಿರಂಗಪಡಿಸಲು ಸಾಧ್ಯವಿಲ್ಲ. ಯಾವುದೇ ವಿಚಾರ ಬಹಿರಂಗಗೊಂಡರೆ ಎಸ್ಐಟಿ ತನಿಖೆಗೆ ಅಡ್ಡಿಯಾಗುತ್ತೆ, ಯಾವುದನ್ನು ಕೂಡ ಈಗ ಭೈರಂಗಪಡಿಸಲು ಸಾಧ್ಯವಿಲ್ಲ. ಬಿಜೆಪಿಯವರು ಅನೇಕ ಆರೋಪಗಳನ್ನು ಮಾಡಬಹುದು, ಬೇರೆ ಬೇರೆ ರೀತಿಯ ಹೇಳಿಕೆಗಳು ಬರಬಹುದು, ಆದರೆ ಹೇಳಿಕೆಗಳ ಆಧಾರದಲ್ಲಿ ತನಿಖೆ ಮಾಡಲು ಆಗಲ್ಲ. ಎಸ್ಐಟಿ ತನ್ನ ಅಂತಿಮ ವರದಿ ಸಲ್ಲಿಸುವವರಿಗೆ ಏನು ಹೇಳಲು ಆಗುವುದಿಲ್ಲ ಎಂದರು

ಇನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮುಖ್ಯಮಂತ್ರಿಗಳ ನಿಂದನೆ ವಿಚಾರಕ್ಕೆ ಪ್ರತಿಕ್ರಿಯಿಸಿ, 23ರಲ್ಲಿ ಪೂಂಜ ನೀಡಿರುವ ಹೇಳಿಕೆ ಅದು, ಹೇಳಿಕೆ ವಿಚಾರದಲ್ಲಿ ಅವರು ತಡೆಯಾಜ್ಞ ತೆಗೆದುಕೊಂಡಿದ್ದಾರೆ. ತಡೆ ಆಜ್ಞೆ ತೆರವಾದರೆ ಕ್ರಮ ತೆಗೆದುಕೊಳ್ಳಬಹುದು ಎಂದರು. ಇನ್ನು ಯಾವ ಸೆಕ್ಷನ್ ನಲ್ಲಿ ಬಂಧಿಸಲಾಗಿದೆ ಅನ್ನುವುದು ಎಸ್ಐಟಿಯವರಿಗೆ ಗೊತ್ತು, ದೂರುದಾರನ ಹೇಳಿಕೆ ಆಧಾರದಲ್ಲಿ ತನಿಖೆ ಪ್ರಾರಂಭಿಸಿದ್ದೆವು. ಎಸ್ ಐ ಟಿ ಹೇಳಿದ್ದನ್ನು ಎಲ್ಲವೂ ಹೇಳಲು ಸಾಧ್ಯವಿಲ್ಲ, ಅರೆಸ್ಟ್ ಆಗಿರುವುದನ್ನು ಮಾತ್ರ ನಾನು ಹೇಳಬಲ್ಲೆ ಎಂದರು.