Sunday, June 29, 2025

spot_img

ಮೈಸೂರಿನ ಉದಯಗಿರಿ ಘಟನೆ: ರಾಜ್ಯಸರ್ಕಾರವನ್ನು ವಜಾಕ್ಕೆ ಉಡುಪಿ ಜಿಲ್ಲಾ ಯುವಮೋರ್ಚಾ ಮನವಿ

ಉಡುಪಿ : ಮೈಸೂರಿನ ಉದಯಗಿರಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಘಟನೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥಿತೆ ಸಂಪೂರ್ಣ ಹದಗೆಟ್ಟಿದ್ದು ರಾಜ್ಯಸರ್ಕಾರವನ್ನು ವಜಾಮಾಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಘನತೆವೆತ್ತ ರಾಜ್ಯಪಾಲರಲ್ಲಿ ಉಡುಪಿ ಜಿಲ್ಲಾಧಿಕಾರಿಯವರ ಮೂಲಕ ಉಡುಪಿ ಜಿಲ್ಲಾ ಯುವಮೋರ್ಚಾ ವತಿಯಿಂದ ಮನವಿ ಸಲ್ಲಿಸಲಾಯಿತು.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ವಿಚಾರಕ್ಕೆ ಸಂಬಂಧಿಸಿದಂತೆ ಮುಂದುವರಿದ ಭಾಗವಾಗಿ ಫೆ10 ರ ರಾತ್ರಿ 8.30 ಕ್ಕೆ ಪೋಲಿಸ್ ಠಾಣೆಗೆ ನುಗ್ಗಿ, ಪೋಲಿಸ್ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿ, 7 ಮಂದಿ ಪೋಲಿಸ್ ಸಿಬ್ಬಂದಿಗಳ ಮೇಲೆ ಹಲ್ಲೆನಡೆಸಿ ಕಾನೂನು ಕೈಗೆತ್ತಿಕೊಂಡಿರುವುದು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಕ್ಕೆ ಸಾಕ್ಷಿ ಈ ಘಟನೆ ಕೆ.ಜಿ ಹಳ್ಳಿ ,ಡಿ.ಜೆ ಹಳ್ಳಿ ಮಾದರಿಯ ಪೂರ್ವ ನಿಯೋಜಿತ ಘಟನೆಯಂತೆ ತೋರಿಬರುತ್ತಿದ್ದು ಈ ಘಟನೆಯ ಹಿಂದೆ ಇರುವ ಮತೀಯ ಶಕ್ತಿಗಳು ಯಾವುವು? ಇಂತಹ ಘಟನೆ ಅದ ನಂತರವೂ ಸರ್ಕಾರದ ಸಚಿವರುಗಳು ಬೇಜವಬ್ದಾರಿ ಹೇಳಿಕೆ ನೀಡುತ್ತಿರುವುದು ಇನ್ನೂ ಪ್ರಚೋದನೆ ನೀಡುತ್ತಿರುವುದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥಿತೆ ಕಾಪಾಡುವ ಪೋಲಿಸರಿಗೆ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು ಜನಸಾಮಾನ್ಯರ ಗತಿ ಏನು? ರಾಜ್ಯದಲ್ಲಿ ಕಾನೂನು ಸುವ್ಯವಸ್ಥಿತೆ ಸಂಪೂರ್ಣ ಹದಗೆಟ್ಟಿದ್ದು ರಾಜ್ಯಸರ್ಕಾರವನ್ನು ವಜಾಮಾಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಪ್ರತ್ವಿರಾಜ್ ಶೆಟ್ಟಿ ಬಿಲ್ಲಾಡಿ, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಭಿರಾಜ್ ಸುವರ್ಣ, ಶಶಾಂಕ್ಈ ಶಿವತ್ತಾಯ, ಉಪಾಧ್ಯಕ್ಷರಾದ ಸಚಿನ್ ಪಿತ್ರೋಡಿ, ಉಡುಪಿ ನಗರ ಯುವಮೋರ್ಚಾ ಅಧ್ಯಕ್ಷರಾದ ಶ್ರೀವತ್ಸ, ಪ್ರಧಾನ ಕಾರ್ಯದರ್ಶಿಯಾದ ನಿತಿನ್ ಪೈ ಮಣಿಪಾಲ, ನಗರ ಯುವಮೋರ್ಚಾ ಕಾರ್ಯದರ್ಶಿಯಾದ ಧನುಷ್ ಶೆಟ್ಟಿ, ಕಾರ್ಯಾಲಯ ಕಾರ್ಯದರ್ಶಿ ಭೂಷಣ್, ಅಜಿತ್ ಜೋಗಿ ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles