Monday, July 28, 2025

spot_img

ರಾಷ್ಟ್ರೀಯ ಮಟ್ಟದ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿಗೆ ಭಾಜನರಾದ ಗಣೇಶ್‌ ಮೊಗವೀರ

ಕುಂದಾಪುರ : ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಇವರು ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಗಣೇಶ ಮೊಗವೀರ ಅವರ ಇದುವರೆಗಿನ ಶೈಕ್ಷಣಿಕ ಸಾಧನೆ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ 2025 ನೇ ಸಾಲಿನ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮುಂಬೈನ ಪ್ರಸಿದ್ಧ ತಾಜ್ ಹೋಟೆಲ್ ನಲ್ಲಿ ಆಯೋಜಿಸಿದ ವೈಭವದ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಗಣೇಶ ಮೊಗವೀರ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಾಧನೆಗೆ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಬೋಧಕ, ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles