Wednesday, June 11, 2025

spot_img

ರಾಷ್ಟ್ರೋತ್ಥಾನ ಪರಿಷತ್‌‌ನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಲೋಕಾರ್ಪಣೆ

ಉಡುಪಿ: ಇಲ್ಲಿನ ಬ್ರಹ್ಮಾವರ ತಾಲೂಕಿನ ಚೇರ್ಕಾಡಿಯ ಕೇಶವ ನಗರದಲ್ಲಿ ರಾಷ್ಟ್ರೋತ್ಥಾನ ಪರಿಷತ್‌‌ನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ – ಸಿಬಿಎಸ್‌ಇ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ಕಟ್ಟಡಗಳ ಲೋಕಾರ್ಪಣೆ ಏ.30 ರಂದು ಸಂಜೆ 4.30ಕ್ಕೆ ನೆರವೇರಲಿದೆ. ಈ ಬಗ್ಗೆ ರಾಷ್ಟ್ರೋತ್ಥಾನ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ನಾ. ದಿನೇಶ್‌ ಹೆಗ್ಡೆ ಅವರು ಸೋಮವಾರ ಕೇಶವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಭಾರತೀಯ ಸಂಸ್ಕೃತಿಯ ಜೊತೆಗೆ ಅಧುನಿಕ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಆರಂಭಗೊಂಡ ಶಿಕ್ಷಣ ಸಂಸ್ಥೆಯು 60 ವರ್ಷಗಳನ್ನು ಪೂರೈಸಿದೆ. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ದೀಪಪ್ರಜ್ವಲನೆ ನಡೆಸಲಿದ್ದು, ರಾ.ಸ್ವ.ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹಾಗೂ ಇಸ್ರೋದ ನಿಕಟಪೂರ್ವ ಅಧ್ಯಕ್ಷ ಡಾ. ಎಸ್. ಸೋಮನಾಥ್ ಅವರು ಉಪಸ್ಥಿತರಿರುತ್ತಾರೆ ಎಂದರು.

ಅದಕ್ಕೂ ಪೂರ್ವದಲ್ಲಿ ಏ.29 ರ ಸಂಜೆ ಉಡುಪಿಯ ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ದಿವ್ಯಸಾನ್ನಿಧ್ಯದಲ್ಲಿ ಕಟ್ಟಡಗಳ ವಾಸ್ತುಪೂಜೆ ಮತ್ತು ಏ.30 ರ ಬೆಳಗ್ಗೆ ಉಡುಪಿಯ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥರ ದಿವ್ಯ ಸಾನ್ನಿಧ್ಯದಲ್ಲಿ ಕಟ್ಟಡಗಳ ಗೃಹಪ್ರವೇಶ ಮತ್ತುಳಿದ ಧಾರ್ಮಿಕ ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ ಎಂದರು. ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಸಿ.ಬಿ.ಎಸ್.ಇ. ಶಾಲೆಗಳ ಸಮೂಹ ೨೦೦೫-೦೬ ಕಾರ್ಯಾರಂಭಿಸಿ, ಈಗಾಗಲೇ ರಾಜ್ಯದಲ್ಲಿ 12 ಜಿಲ್ಲೆಗಳಲ್ಲಿ 16 ವಿದ್ಯಾ ಕೇಂದ್ರಗಳನ್ನು ಆರಂಭಿಸಲಾಗಿದ್ದು, 18,000 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈಗ ಉಡುಪಿಗೆ ಪಾದಾರ್ಪಣೆ ಮಾಡುತ್ತಿದೆ. ಇದೇ ಮೇ ತಿಂಗಳಿನಿಂದ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗಲಿವೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಚಲನಾ ಸಮಿತಿ ಅಧ್ಯಕ್ಷ ಸಾಧು ಸಾಲಿಯನ್, ಕಾರ್ಯದರ್ಶಿ ರಿಷಿರಾಜ್, ಪಿಯು ಕಾಲೇಜಿನ ಪ್ರಾಂಶುಪಾಲ ಭಾಗ್ಯಶ್ರೀ ಐತಾಳ್, ವಿದ್ಯಾಕೇಂದ್ರದ ಪ್ರಾಂಶುಪಾಲ ಪೂರ್ಣಿಮಾ, ಪ್ರಮುಖರಾದ ವಸಂತ್ ಕುಮಾರ್ ಉಪಸ್ಥಿತರಿದ್ದರು. 

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles