ಕುಂದಾಪುರ : ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ ಕ್ಕೆ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅವರ ಭೇಟಿ ಕಾರ್ಯಕ್ರಮ ನಡೆಯಿತು. ಇದೇ ಸಂದರ್ಭ ಹಿರಿಯ ಪರಿಸರವಾದಿ ಸಮಾಜ ಸೇವಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೊರ್ಗಿ ವಿಠಲ ಶೆಟ್ಟಿ ಹಾಗೂ ಮಂಗಳೂರು ಆಕಾಶವಾಣಿ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಯರನ್ನು ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂಧರ್ಭದಲ್ಲಿ ಕೊರ್ಗಿ ವಿಠಲ ಶೆಟ್ಟಿಯವರ ಸಾಮಾಜಿಕ ಕಳಕಳಿ ಪರಿಸರ ಕಾಳಜಿ ಹಾಗೂ ಜಾನಪದ ಪರಂಪರೆಯನ್ನು ಉಳಿಸಿ ಜನತೆಯ ಹೃದಯಗಳಿಗೆ ತಲುಪಿಸುವಲ್ಲಿ ಅಪಾರ ಕೊಡುಗೆ ನೀಡಿರುವ ಡಾ.ಗಣೇಶ್ ಗಂಗೋಳ್ಳಿಯವರ ಸಾಧನೆ ಕುರಿತು ಲಯನ್ಸ್ ಪ್ರಾಂತೀಯ ಅಧ್ಯಕ್ಷ ಬನ್ನಾಡಿ ಸೋಮನಾಥ ಹೆಗ್ಡೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾರಂಭದ ವೇದಿಕೆಯಲ್ಲಿ ಪ್ರಾಂತೀಯ ಕಾರ್ಯದರ್ಶಿ ಆನಂದ್ ಶೆಟ್ಟಿ, ವಲಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ವಿಸ್ತರಣಾಧಿಕಾರಿ ಅಕ್ಷಯ ಹೆಗಡೆ ಮೊಳಹಳ್ಳಿ ಉಪಸ್ಥಿತರಿದ್ದರು. ಲಯನ್ಸ್ ಕುಂದಾಪುರ ಅಮೃತಧಾರಾದ ಅಧ್ಯಕ್ಷೆ ಡಾ.ವಾಣಿಶ್ರೀ ಐತಾಳ್ ಪ್ರಸ್ತಾವಿಸಿ ಸ್ವಾಗತಿಸಿದರು. ಸುಮಶ್ರೀ ಧನ್ಯ ಪ್ರಾರ್ಥಿಸಿದರು.

ಶ್ರೀವಿದ್ಯಾ ಧ್ವಜ ವಂದನೆಗೈದರು. ಆಶಾ ಶಿವರಾಮ ಶೆಟ್ಟಿ ನೀತಿ ಸಂಹಿತೆಯನ್ನು ವಾಚಿಸಿದರು. ಕಾರ್ಯದರ್ಶಿ ಡಾ. ಶಿಲ್ಪ ಶೈಲೇಶ್ ರಾವ್ ವರದಿ ವಾಚಿಸಿದರು. ಕೋಶಾಧಿಕಾರಿ ಅಮೃತ ಬನವಾಲಿಕರ್ ವಂದಿಸಿದರು. ಜಯಶೀಲ ಕಾಮತ್, ಸರಸ್ವತಿ ಪುತ್ರನ್ ಕಾರ್ಯಕ್ರಮ ನಿರೂಪಿಸಿದರು. ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರಾ ಸದಸ್ಯರಾದ ಚಂದ್ರಿಕಾ ಧನ್ಯ, ಕಲ್ಪನಾ ಭಾಸ್ಕರ್, ವಿಜಯಲಕ್ಷ್ಮಿ ಬಿ, ಶೈಲಾ ಶೇರೆಗಾರ್, ಲಯನ್ಸ್ ಜಿಲ್ಲಾ ಕ್ಯಾಬಿನೆಟ್ ಸದಸ್ಯರು, ಪ್ರಾಂತ್ಯದ ಎಲ್ಲ ಕ್ಲಬ್ಗಳ ಅಧ್ಯಕ್ಷ, ಕಾರ್ಯದರ್ಶಿ ಕೋಶಾಧಿಕಾರಿಗಳು,ಆಹ್ವಾನಿತ ಅತಿಥಿಗಳು ಉಪಸ್ಥಿತರಿದ್ದರು.