Saturday, June 28, 2025

spot_img

ವಾಣಿಜ್ಯ ಸಂಕೀರ್ಣಗಳ ಕಲುಷಿತ ನೀರು ಚರಂಡಿಗೆ: ಎಚ್ಚರಿಕೆ ನೀಡಿದ ನಗರ ಸಭೆ

ಉಡುಪಿ : ನಗರಸಭಾ ವ್ಯಾಪ್ತಿಯಲ್ಲಿರುವ ವಾಣಿಜ್ಯ ಸಂಕೀರ್ಣಗಳ ಮಾಲೀಕರುಗಳಿಗೆ, ತಮ್ಮ ಕಟ್ಟಡದ ಕಲುಷಿತ ನೀರನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ವ್ಯವಸ್ಥೆ ಮಾಡಿಕೊಳ್ಳಬೇಕು ಇಲ್ಲವಾದಲ್ಲಿ ಕ್ರಮ ಜರುಗಿಸಲಾಗುವುದು ಎಂದು ಈಗಾಗಲೇ ನೋಟಿಸ್ ನೀಡಲಾಗಿದ್ದರೂ ಸಹ ನಗರಸಭೆಯ ವ್ಯಾಪ್ತಿಯಲ್ಲಿ ಮಳೆ ನೀರು ಹರಿಯುವ ಚರಂಡಿಗಳಿಗೆ ವಸತಿ ಸಮುಚ್ಚಯ, ಹೋಟೆಲ್, ಇತ್ಯಾದಿ ವಾಣಿಜ್ಯ ಸಂಕೀರ್ಣಗಳ ಕೊಳಚೆ ನೀರನ್ನು ಅನಧಿಕೃತವಾಗಿ ಬಿಡುತ್ತಿರುವುದು ಕಂಡು ಬಂದಿದ್ದು, ಇದರಿಂದ ಕಲುಷಿತ ನೀರು ಕುಡಿಯುವ ನೀರಿನ ಮೂಲಗಳನ್ನು ಸೇರಿ ನೆರೆಹೊರೆಯ ಬಾವಿಗಳ ನೀರು ಹಾಳಾಗುತ್ತಿದೆ ಹಾಗೂ ನೈರ್ಮಲ್ಯಕ್ಕೂ ತೊಂದರೆಯುಂಟಾಗಿರುವ ಬಗ್ಗೆ ನಿರಂತರ ದೂರುಗಳು ಕೇಳಿಬಂದಿರುತ್ತದೆ. ಆದ್ದರಿಂದ ನಗರಸಭೆಯ ನೋಟಿಸ್‌ನ ಹೊರತಾಗಿಯೂ ಎಚ್ಚೆತ್ತುಕೊಳ್ಳದೇ ತಮ್ಮ ಕಟ್ಟಡದ ಕೊಳಚೆ ನೀರನ್ನು, ಮಳೆ ನೀರು
ಹರಿಯುವ ಚರಂಡಿಗೆ ಬಿಡುತ್ತಿರುವ ಕಟ್ಟಡ ಮಾಲೀಕರ ವಿರುದ್ಧ ಕ್ರಮ ಕೈಗೊಂಡು ಸದರಿ ಕಟ್ಟಡಗಳ ಮೂಲಭೂತ ಸೌಕರ್ಯಗಳನ್ನು ಕಡಿತಗೊಳಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles