Monday, February 23, 2026

spot_img

ವಾರಾಹಿ ಹೊಳೆಯಲ್ಲಿ ಈಜಲು ತೆರಳಿದ್ದ ಯುವಕನ ದುರ್ಘಟನೆ : ಚಿಕಿತ್ಸೆ ಫಲಿಸದೆ ಸಾವು

ಉಡುಪಿ : ಹೊಸಂಗಡಿ ಗ್ರಾಮದ ಭಾಗೀಮನೆ ಸಮೀಪದ ತೊಂಬಟ್ಟು ವಾರಾಹಿ ಹೊಳೆಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ತೀವ್ರವಾಗಿ ಅಸ್ವಸ್ಥಗೊಂಡು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಉಳ್ಳೂರು–74 ಗ್ರಾಮದ ಭುಜಂಗ ಶೆಟ್ಟಿ ಬಡ್ಡಎಂಬವರ ಪುತ್ರ ಸುಧೀರ್ (26) ಎಂದು ಗುರುತಿಸಲಾಗಿದೆ.     

 ಫೆಬ್ರವರಿ 15ರಂದು ಸುಧೀರ್ ತೊಂಬಟ್ಟು ವಾರಾಹಿ ಹೊಳೆಗೆ ಈಜಾಡಲು ತೆರಳಿದ್ದ ವೇಳೆ, ಈಜು ಸರಿಯಾಗಿ ಬಾರದ ಕಾರಣ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದರೆಂದು ತಿಳಿದು ಬಂದಿದೆ. ಸ್ಥಳದಲ್ಲಿದ್ದವರು ತಕ್ಷಣವೇ ಯುವಕನನ್ನು ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಕೆಲ ದಿನಗಳಿಂದ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಧೀರ್ ಅವರು ಫೆಬ್ರವರಿ 21ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಈ ಸಂಬಂಧ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಯುವಕನ ಅಕಾಲಿಕ ಸಾವಿನಿಂದ ಕುಟುಂಬದಲ್ಲಿ ಶೋಕದ ವಾತಾವರಣ ಮನೆಮಾಡಿದೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles