ಕುಂದಾಪುರ: ರಾಜ್ಯದ ಅಭಿವೃದ್ಧಿಗಿಂತ ವೋಟ್ ಬ್ಯಾಂಕ್ ರಾಜಕಾರಣವೇ ಮೇಲು ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ ಕಾಂಗ್ರೆಸ್ ಸರಕಾರ, ಮುಸಲ್ಮಾನರಿಗೆ ಶೇಕಡ 4ರಷ್ಟು ಮೀಸಲಾತಿ ಕೊಡುವ ಮೂಲಕ ಜಾತಿ ಧರ್ಮಗಳ ಮಧ್ಯ ಬಿರುಕು ಮೂಡಿಸುತ್ತಿರುವುದಲ್ಲದೆ. ಮುಸ್ಲಿಮರಿಗಾಗಿ ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವುದು ಖಂಡನೀಯ ಎಂದು ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಹೇಳಿದರು,

ಅವರು ಕುಂದಾಪುರ ಶಾಸ್ತ್ರಿ ವೃತ್ತದ ಬಳಿ, ಡಿಕೆಶಿವಕುಮಾರ್ ಸಂವಿಧಾನ ತಿದ್ದುಪಡಿ ಮಾಡುತ್ತಿವೆ ಎಂಬ ಹೇಳಿಕೆಯ ವಿರುದ್ಧ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಇವರ ನೇತೃತ್ವದಲ್ಲಿ ಆಯೋಜಿಸಲಾದ ಬ್ರಹತ್ ಪ್ರತಿಭಟನೆಯಲ್ಲಿ ಮಾತಾನಾಡಿದರು. ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿಯವರು ಸಂವಿಧಾನ ಬದಲಾಯಿಸುತ್ತೇನೆ ಎಂದು ಹೇಳಿಕೆ ನೀಡಿರುವ ಸಂವಿಧಾನ ವಿರೋಧಿ ಡಿಕೆ ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆಯವರು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿ ಡಿಕೆ ಶಿವಕುಮಾರ್ ಮಾತನ್ನು ಖಂಡಿಸಿದರು. ಬಿಜೆಪಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ ,,ಸುಧೀರ್ ಕೆ. ಎಸ್. ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ,, ಉಪಾದ್ಯಕ್ಷೆ ವನಿತಾ ಬಿಲ್ಲವ,,ಕುಂದಾಪುರ ಮಂಡಲ ಉಪಾಧ್ಯಕ್ಷರುಗಳು, ಮಂಡಲದ ಪದಾಧಿಕಾರಿಗಳು ವಿವಿಧ ಮೊರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಮತ್ತು ಸದಸ್ಯರು,ಮತ್ತು ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಂವಿಧಾನ ವಿರೋಧಿ ಡಿಕೆ ಶಿವಕುಮಾರ್ ಅವರಿಗೆ ಧಿಕ್ಕಾರದ ಘೋಷಣೆಗಳನ್ನು ಕೂಗಿ ಡಿಕೆ ಶಿವಕುಮಾರ್ ರವರ ಪ್ರತಿಕೃತಿ ದಹಿಸಿಲಾಯಿತು.