Sunday, July 6, 2025

spot_img

ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ

ಉಡುಪಿ : ಉಡುಪಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಸರಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಯ 20,000 ವಿದ್ಯಾರ್ಥಿಗಳಿಗೆ ಮೇ 30 ಶಾಲಾ ಪುನರಾರಂಭದಂದು ತಮ್ಮ ಪುಷ್ಟಾನಂದ ಫೌಂಡೇಶನ್ ವತಿಯಿಂದ ಸಿಹಿತಿಂಡಿ ನೀಡಿ ಸ್ವಾಗತಿಸುವುದಾಗಿ ತಮ್ಮ ಪುಷ್ಟಾನಂದ ಫೌಂಡೇಶನ್ ವತಿಯಿಂದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಪುಷ್ಪಾನಂದ ಫೌಂಡೇಶನ್ ವತಿಯಿಂದ ಮೇ 30 ರಂದು ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 125 ಶಾಲೆಯ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಶಾಲಾ ಪುನರಾರಂಭದ ಅಂಗವಾಗಿ ಉಡುಪಿ ಕ್ಷೇತ್ರದ ವಿವಿಧ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಶಿಕ್ಷಣ ಪ್ರೇಮಿಗಳು ತಮ್ಮ ವ್ಯಾಪ್ತಿಯ ಶಾಲೆಗಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳ ಸಂಭ್ರಮಕ್ಕೆ ಸಾಕ್ಷಿಯಾಗುವಂತೆ ಮನವಿ ಮಾಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles