ಉಡುಪಿ : ಉಡುಪಿ ನಗರಸಭೆಯ ಶಿರಿಬೀಡು, ಅಂಬಲಪಾಡಿ, ಬನ್ನಂಜೆ ಹಾಗೂ ಅಂಬಲಪಾಡಿ ವಾರ್ಡಿನ ಜನಸಂಪರ್ಕ ಸಭೆಯನ್ನು ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ ಪಾಲ್ ಸುವರ್ಣ ನಡೆಸಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

4 ವಾರ್ಡಿನ ಪ್ರಮುಖ ಬೇಡಿಕೆ ಹಾಗೂ ಸಮಸ್ಯೆಗಳ ಪರಿಹಾರ ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಆದ್ಯತೆಯ ಮೇರೆಗೆ ವಿಶೇಷ ಮುತುವರ್ಜಿ ವಹಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಡುಪಿ tನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ನಗರಸಭಾ ಸದಸ್ಯರಾದ ಶ್ರೀ ಹರೀಶ್ ಶೆಟ್ಟಿ, ಶ್ರೀಮತಿ ರಶ್ಮಿ ಸಿ. ಭಟ್, ಶ್ರೀಮತಿ ಸವಿತಾ ಹರೀಶ್ ರಾಮ್, ಶ್ರೀ ಟಿ. ಜಿ. ಹೆಗ್ಡೆ, ಪಕ್ಷದ ಪ್ರಮುಖರು, ವಾರ್ಡಿನ ನಾಗರಿಕರು ಉಪಸ್ಥಿತರಿದ್ದರು.
