Thursday, October 23, 2025

spot_img

ಸ್ವಸಾಮರ್ಥ್ಯ, ಆತ್ಮ ವಿಶ್ವಾಸ ಇದ್ದಾಗ ಯಶಸ್ವಿ ಉದ್ಯಮಿಯಾಗಲು ಸಾಧ್ಯ: ಬಿಷಪ್ ಜೆರಾಲ್ಡ್ ಲೋಬೊ

ಕಾರ್ಕಳ: ಯಾರಲ್ಲಿ ಕನಸು, ಛಲ, ಸ್ವಸಾಮರ್ಥ್ಯ, ಆತ್ಮ ವಿಶ್ವಾಸ ಇದ್ದಾಗ ಓರ್ವ ಯಶಸ್ವಿ ಉದ್ಯಮಿಯಾಗಲು ಸಾಧ್ಯವಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಗುರುವಾರ ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದ ಸಮುದಾಯ ಭವನದಲ್ಲಿ ಕರಾವಳಿ ಕ್ರಿಶ್ಚಿಯನ್ ಛೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀ ಇದರ ವಾರ್ಷಿಕ ಸಹಮಿಲನ ಹಾಗೂ ಪ್ರೇರಣಾ ಪ್ರಶಸ್ತಿ ಪ್ರದಾನದಲ್ಲಿ ಭಾಗವಹಿಸಿ ಮಾತನಾಡಿದರು.

 ಪ್ರತಿಯೊಬ್ಬ ಸ್ವಉದ್ಯಮಿಯಲ್ಲಿ ವಿಶೇಷವಾದ ಕಲೆ ಇದ್ದು, ರಾಜ್ಯ ಮತ್ತು ಕೇಂದ್ರ ಸರಕಾರಗಳಿಂದ ಸ್ವ ಉದ್ಯಮಕ್ಕೆ ಸೂಕ್ತವಾದ ಹಣಕಾಸು ನೆರವು ಲಭ್ಯವಿದ್ದು ಅದರ ಉಪಯೋಗವನ್ನು ಪಡೆದುಕೊಂಡು ಯಶಸ್ವಿಯಾಗಬೇಕು. ಇಂದಿನ ಯುವಜನತೆ ಉದ್ಯೋಗಕ್ಕಾಗಿ ವಿದೇಶದ ದಾರಿ ಹುಡುಕುತ್ತಿದ್ದು ನಮ್ಮ ಭಾರತ ದೇಶದಲ್ಲಿಯೇ ಮುಂದಿನ 20 ವರ್ಷಗಳಿಗೆ ಬೇಕಾಗುವಷ್ಠು ಉದ್ಯೋಗದ ಅವಕಾಶವಿದ್ದು ಅದಕ್ಕೆ ಪೂರಕವಾದ ವಿದ್ಯಾಭ್ಯಾಸವನ್ನು ಪಡೆದಾಗ ಮಾತ್ರ ಅದನ್ನು ಪಡೆಯಲು ಸಾಧ್ಯವಿದೆ. ಕೆಸಿಸಿಸಿಐ ಸಂಘಟನೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಸಮಾಜಕ್ಕೆ ಪರಿಚಯಿಸುತ್ತಿದ್ದು ಇದರೊಂದಿಗೆ ವರ್ಷಕ್ಕೊಮ್ಮೆ ಉದ್ಯೋಗ ಮೇಳ ಆಯೋಜಿಸುವ ಮೂಲಕ ಉದ್ಯೋಗ ಅರಸುವ ಯುವಕರಿಗೆ ಸಹಕಾರ ನೀಡಿದಂತಾಗುತ್ತದೆ ಎಂದರು.

  ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಸ್ ಐ ಕರ್ನಾಟಕ ದಕ್ಷಿಣ ಪ್ರಾಂತ್ಯ ಸಭೆಯ ಧರ್ಮಾಧ್ಯಕ್ಷರಾದ ಅತಿ ವಂ|ಹೇಮಚಂದ್ರ ಕುಮಾರ್ ಮಾತನಾಡಿದ ಸಂಸ್ಥೆ ಹುಟ್ಟು ಹಾಕುವುದು ಸುಲಭ ಆದರೆ ಅದನ್ನು ಯಶಸ್ವಿಯಾಗಿ ಮುನ್ನಡೆಸುವುದು ಅಗತ್ಯ. ಈ ನಿಟ್ಟಿನಲ್ಲಿ ಕೆಸಿಸಿಸಿಐ ಯಶಸ್ವಿಯಾಗಿರುವುದು ಅಭಿನಂದನೀಯ ಸಂಗತಿಯಾಗಿದೆ. ಉದ್ಯಮದಲ್ಲಿ ಬದ್ಧತೆ ಇದ್ದಾಗ ಅದರಲ್ಲಿ ಯಶಸ್ಸು ಸಿಗುತ್ತದೆ. ನಮ್ಮಲ್ಲಿ ಹಲವಾರು ಪ್ರತಿಭೆಗಳಿದ್ದು ಅದನ್ನು ಉತ್ತಮವಾಗಿ ಉಪಯೋಗಿಸಿ ಉದ್ಯಮವನ್ನು ಮುನ್ನಡೆಸಿದಾಗ ಸಮಾಜ ಕೂಡ ಗುರುತಿಸುತ್ತದೆ ಎಂದರು. ಕಾರ್ಯಕ್ರಮದಲ್ಲಿ ಫ್ರಾನ್ಸಿಸ್ ಡಿ’ಸೋಜಾ, ಪಲಿಮಾರು  ಇವರಿಗೆ ವರ್ಷದ ಉದ್ಯಮಿ ಲವೀಟಾ ಅಂದ್ರಾದೆ ಉಡುಪಿ ಇವರಿಗೆ ಮಹಿಳಾ ಉದ್ಯಮಿ, ಅರುಣ್ ಸುಶೀಲ್ ಕೋಟ್ಯಾನ್ ಸುಭಾಷ್ ನಗರ ಇವರಿಗೆ ಯುವ ಉದ್ಯಮಿ ಹಾಗೂ ಡಾ. ಜೋಸೆಫ್ ಲೋಬೊ ಶಂಕರಪುರ ಇವರಿಗೆ ಪ್ರಗತಿ ಪರ ಕೃಷಿಕ ಪ್ರೇರಣಾ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಡೊಲ್ಫಿ ಮಸ್ಕರೇನಸ್, ಲೂವಿಸ್ ಲೋಬೊ, ವಾಲ್ಟರ್ ಸಲ್ಡಾನಾ ಮತ್ತು ಜೆರಾಲ್ಡ್ ಫೆರ್ನಾಂಡಿಸ್ ಪ್ರಶಸ್ತಿ ವಿಜೇತರ ಪರಿಚಯ ನೀಡಿದರು. ಪ್ರಶಸ್ತಿ ವಿಜೇತರ ಪರವಾಗಿ ಫ್ರಾನ್ಸಿಸ್ ಡಿಸೋಜಾ ಮತ್ತು ಲವಿಟಾ ಅಂದ್ರಾದೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಸಂಘಟನೆಗೆ ಸೇರಿದ ಹೊಸ ಸದಸ್ಯರ ಪರಿಚಯವನ್ನು ಜೀವನ್ ಸಾಲಿನ್ಸ್ ನೀಡಿದರೆ ಸಾಧಕರ ವಿವರವನ್ನು ವಿಲ್ಸನ್ ಡಿಸೋಜಾ ಸಭೆಗೆ ಮಾಹಿತಿ ನೀಡಿದರು. ಸಂಘಟನೆಯ ಅಧ್ಯಕ್ಷ ಸಂತೋಶ್ ಡಿಸಿಲ್ವಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.  ಕಾರ್ಯಕ್ರಮದಲ್ಲಿ ಅತ್ತೂರು ಸಂತ ಲಾರೆನ್ಸ್ ಮೈನರ್ ಬಾಸಿಲಿಕಾದ ವಂ|ಆಲ್ಬನ್ ಡಿಸೋಜಾ, ಸಂಘಟನೆಯ ಕಾರ್ಯದರ್ಶಿ ಆಲ್ವಿನ್ ಕ್ವಾಡ್ರಸ್, ಕೋಶಾಧಿಕಾರಿ ಮ್ಯಾಕ್ಷಿಮ್ ಸಲ್ಡಾನಾ ಉಪಸ್ಥಿತರಿದ್ದರು. ಜಿತೇಂದ್ರ ಫುರ್ಟಾಡೊ ಸ್ವಾಗತಿಸಿ ಆಲ್ವಿನ್ ಕ್ವಾಡ್ರಸ್ ವಂದಿಸಿದರು. ತೆಲ್ಮಾ ಪಿಂಟೊ ಪ್ರಾರ್ಥನೆ ನೆರವೇರಿಸಿದರು. ಸ್ಟೀವನ್ ಕುಲಾಸೊ ಉದ್ಯಾವರ ಕಾರ್ಯಕ್ರಮ ನಿರೂಪಿಸಿದರು.

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles