ಉಡುಪಿ: ಹಲುವಳ್ಳಿ ಯೂಥ್ ಕ್ಲಬ್ (ರಿ) ಹಲುವಳ್ಳಿ ಸಂಘದ 9 ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಹಲುವಳ್ಳಿ ಗೋಪಾಲಕೃಷ್ಣ ಮಠದ ಮುಂಭಾಗ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ವಿಜಯ ಕುಮಾರ್ ಕೊಡಿಯಾಲಬೈಲು ನಿರ್ದೇಶನದ “ಛತ್ರಪತಿ ಶಿವಾಜಿ” ನಾಟಕವನ್ನು ಪ್ರದರ್ಶನ ಏರ್ಪಡಿಸಲಾಗಿತ್ತು. ಸಮಾರಂಭವನ್ನು ಉದ್ಯಮಿ ಸುಗ್ಗಿ ಸುಧಾಕರ್ ಶೆಟ್ಟಿ ಉದ್ಘಾಟಿಸಿ, ಗ್ರಾಮದ ಅಭಿವೃದ್ಧಿಗೆ ಎಲ್ಲರೂ ಒಂದಾಗಿ ಕೈ ಜೋಡಿಸಬೇಕು ಎಂದು ಕರೆ ಕೊಟ್ಟರು.
ಅತಿಥಿಗಳಾಗಿ ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ ಕರ್ಜೆ, ನ್ಯಾಯವಾದಿ ಆರೂರು ಸುಕೇಶ್ ಶೆಟ್ಟಿ, ಪ್ರಮುಖರಾದ ರಾಘವೇಂದ್ರ ಶೆಟ್ಟಿ ಕರ್ಜೆ, ಪ್ರದೀಪ್ ಕುಮಾರ್ ಶೆಟ್ಟಿ, ಶೇಖರ್ ನಾಯ್ಕ್, ಚಂದ್ರಶೇಖರ ಸಾಲ್ಯಾನ್, ಉದಯ್ ಕೋಟ್ಯಾನ್, ಸಂಘದ ಅಧ್ಯಕ್ಷರು ಸುಧಾಕರ್ ಹಲುವಳ್ಳಿ, ಕಾರ್ಯದರ್ಶಿ ವಿಜಯ್ ಕುಮಾರ್, ಖಜಾಂಜಿ ಸುರೇಶ ಕೋಟ್ಯಾನ್ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.