Monday, June 16, 2025

spot_img

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ಉಡುಪಿ: ದಕ ಜಿಲ್ಲೆಯ ಬಜ್ಪೆಯ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಭೀಕರ ಹತ್ಯೆಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಚೇರಿಯ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಯಿತು. ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ, ಬಿಜೆಪಿ ಕಾರ್ಯಕರ್ತರು ಬೀದಿಗೆ ಇಳಿದು ಪ್ರತಿಭಟನೆ  ಮಾಡುವ ಪರಿಸ್ಥಿತಿ ಬಂದೊದಗಿದೆ. ಸುಹಾಸ್ ಶೆಟ್ಟಿಯ ಹತ್ಯೆಯಿಂದ ಬಹಳ ನೋವಾಗಿದೆ. ಹಿಂದೂ ಕಾರ್ಯಕರ್ತರಿಗೆ ಸರಿಗೆ ಮೇಲಿನ ನಡಿಗೆ ಉಂಟಾಗಿದೆ. ಮತಬ್ಯಾಂಕ್ ರಾಜಕಾರಣ, ಮುಸ್ಲಿಂ ಒಲೈಕೆಯಿಂದಾಗಿ ಈ ಸರಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ ಎಂದರು. ಹಣಕಾಸಿನ ವ್ಯವಹಾರ ಇಲ್ಲ, ಹಿಂದೂ ಕಾರ್ಯಕರ್ತನಾಗಿದ್ದ ಎಂಬ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ಜನನಿಬಿಡ ಪ್ರದೇಶದಲ್ಲಿ ಯಾರ ಭಯವು ಇಲ್ಲದೇ ಕೊಲೆ ಮಾಡಿದ್ದಾರೆ. ಪೋಲಿಸ್ ಇಲಾಖೆ ನೈಜ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿದರು. 

ಕುಂದಾಪುರ ಶಾಸಕ ಕಿರಣ್ ಕೊಡ್ಗಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯ್ ಕುಮಾರ್ ಶೆಟ್ಟಿ,ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಜಿ.ಪ್ರ.ಕಾರ್ಯದರ್ಶಿ ರೇಶ್ಮಾ ಶೆಟ್ಟಿ, ರಾಜ್ಯ ಮಹಿಳಾಮೋರ್ಚಾ ಪ್ರ.ಕಾರ್ಯದರ್ಶಿ ಶಿಲ್ಪಾ ಸುವರ್ಣ, ಯುವಮೋರ್ಚಾ ಅಧ್ಯಕ್ಷ ಪೃಥ್ವಿ, ಪ್ರ.ಕಾರ್ಯದರ್ಶಿ ಶಶಾಂಕ್ ಶಿವತ್ತಾಯ, ಅಭಿರಾಜ್ ಸುವರ್ಣ ಉಪಸ್ಥಿತರಿದ್ದರು. 

Related Articles

LEAVE A REPLY

Please enter your comment!
Please enter your name here

Stay Connected

642FansLike
81FollowersFollow
17SubscribersSubscribe
- Advertisement -spot_img

Latest Articles